ಇನ್ನಿಂಗ್ಸ್ ಮುನ್ನಡೆಗಾಗಿ ಕರ್ನಾಟಕ, ಉತ್ತರಪ್ರದೇಶ ಹೋರಾಟ
ಹುಬ್ಬಳ್ಳಿ,
ಡಿ.19 ಪ್ರಸಕ್ತ ಸಾಲಿನ ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ ಕರ್ನಾಟಕ ಹಾಗೂ ಪ್ರವಾಸಿ ಉತ್ತರ ಪ್ರದೇಶ
ತಂಡಗಳು ಮೊದಲ ಇನ್ನಿಂಗ್ಸ್ ಮುನ್ನಡೆಗಾಗಿ ಹೋರಾಟ ನಡೆಸಿದ್ದು, ಮೂರನೇ ದಿನದಾಟದ ಭೋಜನ ವಿರಾಮದ ವೇಳೆ
ಆತಿಥೇಯ ತಂಡ 7 ವಿಕೆಟ್ ನಷ್ಟಕ್ಕೆ 229 ರನ್ ಕಲೆ ಹಾಕಿ, 52 ರನ್ ಹಿನ್ನಡೆ ಅನುಭವಿಸುತ್ತಿದೆ. ಗುರುವಾರ 4 ವಿಕೆಟ್ ಗೆ 168 ರನ್ ಗಳಿಂದ ಆಟ ಮುಂದುವರಿಸಿದ
ಕರ್ನಾಟಕ ಭೋಜನ ವಿರಾಮದ ವೇಳೆಗೆ ಮೂರು ವಿಕೆಟ್ ಕಳೆದುಕೊಂಡಿತು. ಶ್ರೇಯಸ್ ಗೋಪಾಲ್ ಜೊತೆಗೆ ಇನ್ನಿಂಗ್ಸ್
ಬೆಳೆಸುವ ಕನಸಿನೊಂದಿಗೆ ಅಂಗಳಕ್ಕೆ ಇಳಿದ ಅಭಿಷೇಕ್ ರೆಡ್ಡಿ, ತಮ್ಮ ಮೊತ್ತಕ್ಕೆ ಒಂಬತ್ತು ರನ್ ಸೇರಿಸಿ
ಔಟ್ ಆದರು. ವಿಕೆಟ್ ಕೀಪರ್ ಬಿ.ಆರ್.ಶರತ್ ಒಂದು
ಬೌಂಡರಿ, ಒಂದು ಸಿಕ್ಸರ್ ಸಹಾಯದಿಂದ 16 ರನ್ ಬಾರಿಸಿ ಔಟ್ ಆದರು. ಡೇವಿಡ್ ಮಥಾಯಿಸ್ (4) ಬೇಗನೆ ವಿಕೆಟ್
ಒಪ್ಪಿಸಿದರು. ಎಂಟನೇ ವಿಕೆಟ್ ಗೆ ಶ್ರೇಯಸ್ ಗೋಪಾಲ್
(36) ಹಾಗೂ ಆಲ್ ರೌಂಡರ್ ಜೆ.ಸುಚಿತ್ (3) ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 