ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಫೆ.13ಕ್ಕೆ ಕರ್ನಾಟಕ ಬಂದ್
ಬೆಂಗಳೂರು, ಜ. 8: ರಾಜ್ಯದಲ್ಲಿ ಕೂಡಲೇ ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಒತ್ತಾಯಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ, ಅನೇಕ ಕನ್ನಡ ಪರ ಸಂಘಟನೆಗಳು ಫೆ.13ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.
ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಅಧ್ಯಕ್ಷ ನಾಗೇಶ್ ಮಾತನಾಡಿ, ರಾಜ್ಯದಲ್ಲಿ ಕನ್ನಡಿಗರೇ ಪರಭಾಷಿಗರಂತಾಗಿದ್ದಾರೆ. ಇಂದು ಕನ್ನಡ ಮಾತನಾಡುವುದೇ ಅವಮಾನವೆಂಬಂತಾಗಿದೆ. ರಾಜ್ಯದಲ್ಲಿ ಮಾತೃ ಭಾಷೆಯಲ್ಲಿ ಶಿಕ್ಷಣ ಪಡೆದರೂ ಕರ್ನಾಟಕದವರಿಗೆ ಉದ್ಯೋಗವಿಲ್ಲದೆ ನಿರುದ್ಯೋಗಿಗಳಾಗುವ ಪರಿಸ್ಥಿತಿ ಎದುರಾಗದೆ. ಹಾಗಾಗಿ ಸರ್ಕಾರ ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಿ ಕನ್ನಡಿಗರಿಗೆ ಉದ್ಯೋಗ ನೀಡಬೇಕೆಂದು ಆಗ್ರಹಿಸಿದರು.
ಈಗಾಗಲೇ 96 ದಿನದಗಳಿಂದ ನಿರಂತರ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಗಮನ ಹರಿಸಿಲ್ಲ. ಆದ್ದರಿಂದ ನೂರನೇ ದಿನದ ಹೋರಾಟ ದಂದು ಕರ್ನಾಟಕ ಬಂದ್ ಗೆ ಕರೆ ನೀಡಲು ನಿರ್ಧರಿಸಲಾಗಿದೆ. ರಾಜ್ಯ ಸರ್ಕಾರ ಕೇವಲ ಭರವಸೆ ನೀಡದೆ ಅದನ್ನು ಕಾರ್ಯರೂಪಕ್ಕೆ ತರಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ ಬಂದ್ ಗೆ 400 ಕ್ಕೂ ಹೆಚ್ಚು ಸಂಘಟನೆಗಳು ಸಹಕಾರ ನೀಡಿದ್ದು, ಸುಮಾರು 50 ಸಾವಿರಕ್ಕೂ ಹೆಚ್ಚು ಮಂದಿ ಬಂದ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಟೌನ್ ಹಾಲ್ ನಿಂದ ಫ್ರೀಡಂಪಾರ್ಕ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಜೊತೆಗೆ ಬಿಎಂಟಿಸಿ, ಆಟೋ ಚಾಲಕರು ಮತ್ತು ಓಲಾ ಊಬರ್ ಚಾಲಕರ ಸಂಘಟನೆಗಳು ಸಹ ಬಂದ್ ಗೆ ಬೆಂಬಲ ಸೂಚಿಸಿವೆ. ಜೊತೆಗೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಾರ್ವಜನಿಕ ರಜೆ ನೀಡಬೇಕೆಂದು ಮನವಿ ಮಾಡಲಾಗಿದೆ ಎಂದು ಹೇಳಿದರು.
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ 