ಕರ್ನಾಟಕ ಕ್ಷತ್ರಿಯ ಒಕ್ಕೂಟದ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆ
Karnataka Kshatriya Union District Executive Committee Meeting
ಹಾವೇರಿ 23 : ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಕ್ಷತ್ರಿಯ ಒಕ್ಕೂಟದ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆ ಜರುಗಿತು. ಬಾಗಲಕೋಟ ಜಿಲ್ಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮಹೋತ್ಸವದ ಸಮಯದಲ್ಲಿ ನಡೆದ ಕಲ್ಲೆಸೆತದ ವಿರುದ್ಧ ಸಭೆಯಲ್ಲಿ ಖಂಡನೀಯ ನಿರ್ಣಯ ತೆಗೆದುಕೊಳ್ಳಲಾಯಿತು. ಈ ಘಟನೆ ಎಲ್ಲಾ ಹಿಂದೂಗಳಿಗೆ ಹಾಗೂ ಅಭಿಮಾನಿಗಳಿಗೆ ಬೇಸರ ಉಂಟು ಮಾಡಿದೆ. ಕಿಡಕೇಡಿಗಳನ್ನು ಹಾಗೂ ಕೃತ್ಯ ಮಾಡಿರುವ ವ್ಯಕ್ತಿಗಳನ್ನು ಕಾನೂನು ರೀತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು.ಇಲ್ಲದಿದ್ದರೆ ಜಿಲ್ಲಾದ್ಯಾಂತಹ ಪ್ರತಿಭಟನೆ ನಡೆಸಲಾಗುವುದು ಎಂದು ಕೆಕೆಒ ಜಿಲ್ಲಾಧ್ಯಕ್ಷರಾದ ಶಂಕರ ಮೆಹರವಾಡ ಅವರು ಹೇಳಿದರು. ಸಭೆಯಲ್ಲಿ ಜಿಲ್ಲಾ ಗೌರವಾಧ್ಯಕ್ಷರಾದ ನಾಗಾರಾಜ ಜೋರಾಪುರಿ, ಯುವ ಮುಖಂಡರಾದ ದರ್ಶನ ಲಮಾಣಿ,ಅಶೋಕ ರಜಪೂತ,ಪ್ರಮೋದ ಮಣಿ ಪವಾರ, ರವಿ ಕಲಾಲ್, ರಮೇಶ್ ಮಾಳವದೆ, ಆನಂದ ಕಲಾಲ್, ಭಾಗ್ಯಶ್ರೀ ಮೋರೆ ಸೇರಿದಂತೆ ಅನೇಕರು ಮಾತನಾಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಸಂಜು ಕಲಾಲ, ಶ್ರೀಕಾಂತ ಮಾಳದಕರ, ಶಿವಾ ನವಲೆ ಮುಂತಾದ ಅನೇಕ ಕ್ಷತ್ರಿಯ ಸಮಾಜದ ಮುಖಂಡರು ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 