ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ
Karnataka State Government Employees Sports Meet
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ
ವಿಜಯನಗರ 09: ದಿನಾಂಕ: 09 ರಂದು ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ, ಭಾ.ಆ.ಸೇ. ಹಾಗೂ ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ನೊಂಗ್ಜಾಯ್ ಮೊಹಮದ್ ಅಲಿ ಅಕ್ರಮ್ ಶಾ, ಭಾ.ಆ.ಸೇ., ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ-2025 ನ್ನು ಉದ್ಘಾಟಿಸಿದರು.
ಕ್ರೀಡಾ ಜ್ಯೋತಿ, ಕ್ರೀಡಾ ಧ್ವಜಾರೋಹಣ ವನ್ನು ಹಾಗೂ ಧ್ವಜವಂದನೆ ಸ್ವೀಕರಿಸಿದರು. ಜಿಲ್ಲಾಧಿಕಾರಿಗಳು ಸರ್ಕಾರ ನೌಕರರ ಕ್ರೀಡಾಕೂಟಕ್ಕೆ ಶುಭ ಹಾರೈಸಿ ಬಿರು ಬಿಸಿಲಿನಲ್ಲಿ ಎಚ್ಚರಿಕೆಯಿಂದ ಆಟವಾಡಲು ತಿಳಿಸಿದರು. ಸ್ವತಃ ಕ್ರೀಡಾಪಟುಗಳಾದ ಜಿಲ್ಲಾ ಕಾರ್ಯವಣಾಧಿಕಾರಿಗಳು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಎಲ್ಲರೂ ತಮ್ಮ ಜೀವನದಲ್ಲಿ ಕ್ರೀಡೆಗೆ ಅತ್ಯುತ್ತಮವಾದ ಸ್ಥಾನವನ್ನು ನೀಡಬೇಕೆಂದು ತಿಳಿಸಿದರು.
ವಿಜಯನಗರ ಜಿಲ್ಲೆಯ ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷರಾದ ಜಿ. ಮಲ್ಲಿಕಾರ್ಜುನಗೌಡ, ರಾಜ್ಯ ಪರಿಷತ್ ಸದಸ್ಯರಾದ ರಾಘವೇಂದ್ರ, ಜಿಲ್ಲಾ ಖಜಾಂಚಿಗಳಾದ ಕೆ. ಮಲ್ಲೇಶಪ್ಪ, ಜಿಲ್ಲಾ ಕಾರ್ಯದರ್ಶಿಗಳಾದ ಟಿ. ಪಂಪಣ್ಣ ಹಾಗೂ ಜಿಲ್ಲಾ ಮಟ್ಟದ ನೌಕರರ ಕ್ರೀಡಾಕೂಟದಲ್ಲಿ ಜಿಲ್ಲೆಯ ತಾಲೂಕುಗಳ ಕರ್ನಾಟಕ ರಾಜ್ಯ ಸರ್ಕಾರ ನೌಕರರ ಸಂಘದ ಅಧ್ಯಕ್ಷರು ರಾಜ್ಯ ಪರಿಷತ್ ಸದಸ್ಯರು ಹಾಗೂ ಸರ್ವ ಪದಾಧಿಕಾರಿಗಳು ಮತ್ತು ಜಿಲ್ಲೆಯ ವಿವಿಧ ಭಾಗದಿಂದ ನೌಕರರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 