ಕರೋನ ಸಂಕಷ್ಟ : ಆಯುರ್ವೇದ ಚಿಕಿತ್ಸೆಗೆ ಸರ್ಕಾರದ ಹಸಿರು ನಿಶಾನೆ
ಬೆಂಗಳೂರು, ಏ 15, ರಾಜ್ಯದಲ್ಲಿ ಕೊರೊನಾ ಸೋಂಕಿತ ರೋಗಿಗಳಿಗೆ ಆಯುರ್ವೇದ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರವು ಹಸಿರು ನಿಶಾನೆ ತೋರಿದೆ .ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ಮಾಡಿದ ನಂತರ ಆಯುರ್ವೇದ ವೈದ್ಯ ಡಾ.ಗಿರಿಧರ ಕಜೆ ಅವರಿಗೆ ಈ ವಿಷಯ ತಿಳಿಸಿದ್ದಾರೆ. ಸಿಎಂ ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರಂಭದಲ್ಲಿ 10 ಮಂದಿ ಕೊರೊನಾ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲೇ ಆಯುರ್ವೇದದ ಗುಳಿಗೆ ನೀಡಲಾಗುವುದು ಎಂದರು ಅದರ ಫಲಿತಾಂಶ ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.ಇನ್ನು ಎರಡೂ, ಮೂರು ದಿನಗಳಲ್ಲಿ ಇದು ಆರಂಭವಾಗಬಹುದು.ಸರ್ಕಾರದಿಂದ ಅಧಿಕೃತ ಆದೇಶ ಬಂದ ತಕ್ಷಣ ಈ ಔಷಧ ಪ್ರಯೋಗ ಆರಂಭವಾಗಲಿದೆ ಸರ್ಕಾರ ಏನು ಸಲಹೆ ನೀಡಲಿದೆಯೋ ಅದರಂತೆ ನಡೆದುಕೊಳ್ಳುವುದಾಗಿ ಕಜೆ ಸ್ಪಷ್ಟಪಡಿಸಿದರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 