ಸಂಭ್ರಮದಿಂದ ನಡೆದ ನಾಮಧಾರಿ ಸಂಘದ ಕಾರ್ತಿಕ ದೀಪೋತ್ಸವ
Kartik Deepotsava of Namdhari Sangha was celebrated with enthusiasm
ಗೋಕರ್ಣ 17: ಇಲ್ಲಿಯ ಸಮೀಪದ ಹನೇಹಳ್ಳಿ-ಬಂಕಿಕೊಡ್ಲದ ಮುರ್ಕುಂಡಿದೇವ ನಾಮಧಾರಿ ಕ್ಷೇತ್ರಾಭಿವೃದ್ಧಿ ಸಂಘದ ವತಿಯಿಂದ 8ನೇ ವರ್ಷದ ಕಾರ್ತಿಕ ದೀಪೋತ್ಸವವು ಸಂಭ್ರಮ ಸಡಗರದಿಂದ ನಡೆಯಿತು. ದೇವಸ್ಥಾನದುದ್ದಕ್ಕು ವಿದ್ಯುತ್ ಮತ್ತು ಹೂವಿನ ಅಲಂಕಾರ ಮಾಡಲಾಗಿತ್ತು.
ಮುಂಜಾನೆ 10.30 ಕ್ಕೆ ಅಭಿಷೇಕ ಮತ್ತು ಪೂಜೆ ಸಂಜೆ 6 ರಿಂದ 7 ಗಂಟೆಯವರೆಗೆ ಭಜನಾ ಕಾರ್ಯಕ್ರಮ ನಡೆದು 7 ರಿಂದ ದೀಪಾರಾಧನೆ ನಡೆಯಿತು. 7.30 ರಿಂದ 8 ಗಂಟೆಯವರೆಗೆ ಕೋಲಾಟ, ರಾತ್ರಿ 8 ರಿಂದ ಗುಮಟೆ ಪಾಂಗ್ ವಾದನೆ, 8.30 ಕ್ಕೆ ಮಹಾಪೂಜೆ, ಮಹಾಮಂಗಳಾರತಿ ಪ್ರಸಾದ ವಿತರಣೆ ನಡೆಯಿತು.
ಪ್ರತಿಭಾ ಪುರಸ್ಕಾರದ ನಂತರ ಹನೇಹಳ್ಳಿಯ ಮುರ್ಕುಂಡಿ ದೇವಸ್ಥಾನದ ಆವರಣದಲ್ಲಿ ದಕ್ಷಿಣೋತ್ತರ ಕನ್ನಡ ಜಿಲ್ಲೆಯ ಸುಪ್ರಸಿದ್ಧ ಕಲಾವಿದರಿಂದ ಚಂದ್ರಾವಳಿ ವಿಲಾಸ-ಕೃಷ್ಣಾತಂತ್ರ ಯಕ್ಷಗಾನ ಪ್ರದರ್ಶನಗೊಂಡಿತು. ಈ ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು. ಹಾಗೇ ದೇವಸ್ಥಾನದ ಹೊರಾಂಗಣದಲ್ಲಿ ಸಮಾಜ ಸುಧಾರಕ ನಾರಾಯಣ ಗುರುಗಳ ಭಾವಚಿತ್ರವನ್ನು ರಂಗೋಲಿ ಮೂಲಕ ಬಿಡಿಸಿ ದೀಪ ಬೆಳಗಿಸಿದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 