ಸಂಭ್ರಮದಿಂದ ನಡೆದ ನಾಮಧಾರಿ ಸಂಘದ ಕಾರ್ತಿಕ ದೀಪೋತ್ಸವ
Kartik Deepotsava of Namdhari Sangha was celebrated with enthusiasm
ಗೋಕರ್ಣ 17: ಇಲ್ಲಿಯ ಸಮೀಪದ ಹನೇಹಳ್ಳಿ-ಬಂಕಿಕೊಡ್ಲದ ಮುರ್ಕುಂಡಿದೇವ ನಾಮಧಾರಿ ಕ್ಷೇತ್ರಾಭಿವೃದ್ಧಿ ಸಂಘದ ವತಿಯಿಂದ 8ನೇ ವರ್ಷದ ಕಾರ್ತಿಕ ದೀಪೋತ್ಸವವು ಸಂಭ್ರಮ ಸಡಗರದಿಂದ ನಡೆಯಿತು. ದೇವಸ್ಥಾನದುದ್ದಕ್ಕು ವಿದ್ಯುತ್ ಮತ್ತು ಹೂವಿನ ಅಲಂಕಾರ ಮಾಡಲಾಗಿತ್ತು.
ಮುಂಜಾನೆ 10.30 ಕ್ಕೆ ಅಭಿಷೇಕ ಮತ್ತು ಪೂಜೆ ಸಂಜೆ 6 ರಿಂದ 7 ಗಂಟೆಯವರೆಗೆ ಭಜನಾ ಕಾರ್ಯಕ್ರಮ ನಡೆದು 7 ರಿಂದ ದೀಪಾರಾಧನೆ ನಡೆಯಿತು. 7.30 ರಿಂದ 8 ಗಂಟೆಯವರೆಗೆ ಕೋಲಾಟ, ರಾತ್ರಿ 8 ರಿಂದ ಗುಮಟೆ ಪಾಂಗ್ ವಾದನೆ, 8.30 ಕ್ಕೆ ಮಹಾಪೂಜೆ, ಮಹಾಮಂಗಳಾರತಿ ಪ್ರಸಾದ ವಿತರಣೆ ನಡೆಯಿತು.
ಪ್ರತಿಭಾ ಪುರಸ್ಕಾರದ ನಂತರ ಹನೇಹಳ್ಳಿಯ ಮುರ್ಕುಂಡಿ ದೇವಸ್ಥಾನದ ಆವರಣದಲ್ಲಿ ದಕ್ಷಿಣೋತ್ತರ ಕನ್ನಡ ಜಿಲ್ಲೆಯ ಸುಪ್ರಸಿದ್ಧ ಕಲಾವಿದರಿಂದ ಚಂದ್ರಾವಳಿ ವಿಲಾಸ-ಕೃಷ್ಣಾತಂತ್ರ ಯಕ್ಷಗಾನ ಪ್ರದರ್ಶನಗೊಂಡಿತು. ಈ ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು. ಹಾಗೇ ದೇವಸ್ಥಾನದ ಹೊರಾಂಗಣದಲ್ಲಿ ಸಮಾಜ ಸುಧಾರಕ ನಾರಾಯಣ ಗುರುಗಳ ಭಾವಚಿತ್ರವನ್ನು ರಂಗೋಲಿ ಮೂಲಕ ಬಿಡಿಸಿ ದೀಪ ಬೆಳಗಿಸಿದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 