ಸಂಭ್ರಮದಿಂದ ನಡೆದ ನಾಮಧಾರಿ ಸಂಘದ ಕಾರ್ತಿಕ ದೀಪೋತ್ಸವ
Kartik Deepotsava of Namdhari Sangha was celebrated with enthusiasm
ಗೋಕರ್ಣ 17: ಇಲ್ಲಿಯ ಸಮೀಪದ ಹನೇಹಳ್ಳಿ-ಬಂಕಿಕೊಡ್ಲದ ಮುರ್ಕುಂಡಿದೇವ ನಾಮಧಾರಿ ಕ್ಷೇತ್ರಾಭಿವೃದ್ಧಿ ಸಂಘದ ವತಿಯಿಂದ 8ನೇ ವರ್ಷದ ಕಾರ್ತಿಕ ದೀಪೋತ್ಸವವು ಸಂಭ್ರಮ ಸಡಗರದಿಂದ ನಡೆಯಿತು. ದೇವಸ್ಥಾನದುದ್ದಕ್ಕು ವಿದ್ಯುತ್ ಮತ್ತು ಹೂವಿನ ಅಲಂಕಾರ ಮಾಡಲಾಗಿತ್ತು.
ಮುಂಜಾನೆ 10.30 ಕ್ಕೆ ಅಭಿಷೇಕ ಮತ್ತು ಪೂಜೆ ಸಂಜೆ 6 ರಿಂದ 7 ಗಂಟೆಯವರೆಗೆ ಭಜನಾ ಕಾರ್ಯಕ್ರಮ ನಡೆದು 7 ರಿಂದ ದೀಪಾರಾಧನೆ ನಡೆಯಿತು. 7.30 ರಿಂದ 8 ಗಂಟೆಯವರೆಗೆ ಕೋಲಾಟ, ರಾತ್ರಿ 8 ರಿಂದ ಗುಮಟೆ ಪಾಂಗ್ ವಾದನೆ, 8.30 ಕ್ಕೆ ಮಹಾಪೂಜೆ, ಮಹಾಮಂಗಳಾರತಿ ಪ್ರಸಾದ ವಿತರಣೆ ನಡೆಯಿತು.
ಪ್ರತಿಭಾ ಪುರಸ್ಕಾರದ ನಂತರ ಹನೇಹಳ್ಳಿಯ ಮುರ್ಕುಂಡಿ ದೇವಸ್ಥಾನದ ಆವರಣದಲ್ಲಿ ದಕ್ಷಿಣೋತ್ತರ ಕನ್ನಡ ಜಿಲ್ಲೆಯ ಸುಪ್ರಸಿದ್ಧ ಕಲಾವಿದರಿಂದ ಚಂದ್ರಾವಳಿ ವಿಲಾಸ-ಕೃಷ್ಣಾತಂತ್ರ ಯಕ್ಷಗಾನ ಪ್ರದರ್ಶನಗೊಂಡಿತು. ಈ ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು. ಹಾಗೇ ದೇವಸ್ಥಾನದ ಹೊರಾಂಗಣದಲ್ಲಿ ಸಮಾಜ ಸುಧಾರಕ ನಾರಾಯಣ ಗುರುಗಳ ಭಾವಚಿತ್ರವನ್ನು ರಂಗೋಲಿ ಮೂಲಕ ಬಿಡಿಸಿ ದೀಪ ಬೆಳಗಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 