ಜಹೀರ್ ಹಮ್ಜವಿಗೆ ಕರುನಾಡ ಭೂಷಣ ಪ್ರಶಸ್ತಿ ಪ್ರದಾನ
ಲೋಕದರ್ಶನ ವರದಿ
ಕೊಪ್ಪಳ: ಪಕ್ಕದ ಗೋವಾ ರಾಜ್ಯದ ಸಾಕಳಿ ನಗರದಲ್ಲಿ ಇದೇ ನವ್ಹಂಬರ್: 03ರಂದು ಜರುಗಿದೆ ಗೋವಾ ಕನ್ನಡಿಗರ ಸಾಂಸ್ಕೃತಿಕ ಸಂಭ್ರಮ ಹಾಗೂ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಕೊಡಮಾಡಿದ ಕರುನಾಡ ಭೂಷಣ ಪ್ರಶಸ್ತಿಯನ್ನು ಕೊಪ್ಪಳದ ಸ್ಟಾರ ಚಿತ್ರಮಂದಿದಲ್ಲಿ ಕಾರ್ಯನಿರ್ವಹಿಸುತ್ತೀರುವ ಚಿತ್ರ ಪ್ರದರ್ಶಕ(ಆಪರೇಟರ್) ಸೈಯದ್ ಜಹೀರ್ ಹುಸೇನ್ ಹಮ್ಜವಿ ರವರಿಗೆ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು.
ನವ್ಹಂಬರ್: 03 ರಂದು ಸಾಕಳಿ ನಗರದಲ್ಲಿ ಜರುಗಿದ ಕಾರ್ಯಕ್ರಮದ ಉದ್ಘಾಟನೆಯನ್ನು ಗೋವಾ ರಾಜ್ಯದ ಮುಖ್ಯಮಂತ್ರಿ ಪ್ರಮೋದ ಸಾವಂತ್ ನೆರವೇರಿಸಿ ವಿವಿಧ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಿದರು. ಕೊಪ್ಪಳದ ಸ್ಟಾರ ಚಿತ್ರಮಂದಿದಲ್ಲಿ ಕಳೆದ ಐದು ದಶಕದಿಂದ ಕಾರ್ಯನಿರ್ವಹಿಸುತ್ತೀರುವ ಚಿತ್ರ ಪ್ರದರ್ಶಕ(ಆಪರೇಟರ್) ಸೈಯದ್ ಜಹೀರ್ ಹುಸೇನ್ ಹಮ್ಜವಿ ಅವರ ಉತ್ತಮ ಹಾಗೂ ಸೇವೆಯನ್ನು ಪರಿಗಣಿಸಿ ಸದರಿ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಸಭಾ ಸದಸ್ಯ ಬೆಳಗಾವಿಯ ಡಾ. ಪ್ರಭಾಕರ ಕೋರೆ ಸೇರಿದಂತೆ ಗೋವಾ ರಾಜ್ಯದ ಜನಪ್ರತಿನಿಧಿಗಳು ಅಧಿಕಾರಿಗಳು, ಗೋವಾ ಕನ್ನಡಿಗರ ವಿವಿಧ ಸಂಘಗಳ ಪದದಾದಿಕಾರಿಗಳು ಮಠಾಧೀಶರು ಅಲ್ಲದೇ ಸಮ್ಮೇಳನದ ಅಧ್ಯಕ್ಷ ಪ್ರಭು ರತ್ನಾಕರ, ಸಂಘಟಕ ಮಹೇಶಬಾಬು ಸುವರ್ೆ, ಗೋವಾ ಕನ್ನಡಿಗರ ರಾಜ್ಯಾಧ್ಯಕ್ಷ ಹನುಮಂತರಡ್ಡಿ ಶಿರೂರು, ಎಸ್.ಹೆಚ್.ಪಾಟೀಲ್ ಅನೇಕರು ಭಾಗವಹಿಸಿದ್ದರು.
ಗೋವಾದಲ್ಲಿ ಕನ್ನಡ ರಾಜ್ಯೋತ್ಸವದಲ್ಲಿ ನವ್ಹಂಬರ್: 03 ರಂದು ಜರುಗಿದ ಸಾಂಸ್ಕೃತಿಕ ಸಂಭ್ರಮಾಚರಣೆಯಲ್ಲಿ ಸೈಯದ್ ಜಹೀರ್ ಹುಸೇನ್ ಹಮ್ಜವಿ ಕರುನಾಡ ಭೂಷಣ ಪ್ರಶಸ್ತಿ ಲಭಿಸಿರುವದಕ್ಕೆ ಜಿಲ್ಲೆಯ ವಿವಿಧ ಸಂಘಟನೆಗಳು ಹರ್ಷವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 