ಜಮೀಲ್ ಅಹ್ಮದಗೆ ಕರುನಾಡ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಲೋಕದರ್ಶನ ವರದಿ
ಕೊಪ್ಪಳ 20: ಕರ್ನಾಟಕ ಜಾಗೃತಿ ವೇದಿಕೆ ಬೆಂಗಳೂರು, ಕರ್ಮಭೂಮಿ ಕನ್ನಡ ಸಂಘ ಬಿಚ್ಚೊಲಿ, ಗೋವಾ ಸಂಘಟನೆಯ ಸಂಯುಕ್ತ ಆಶ್ರಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಸಹ ಗೋವಾದ ಬಿಚ್ಚೋಲಿ ನಗರದ ಹೀರಾಬಾಯಿ ಹಾಲ್ನಲ್ಲಿ 11ನೇ ಬಾರಿಗೆ ಜರುಗಿದ ಗೋವಾ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನದಲ್ಲಿ ಜಿಲ್ಲೆಯ ಕನಕಗಿರಿ ತಾಲೂಕಿನ ಹಿರೇ ಖೇಡಾ ಗರಾಮ ಪಂಚಾಯತಿಯ ಪಿ.ಡಿ.ಓ. ಜಮೀಲ್ ಅಹ್ಮದ ಇವರಿಗೆ ಕರುನಾಡ ಪದ್ಮಶ್ರೀ ಪ್ರಶಸ್ತಿಯನ್ನು ಗೋವಾದ ಮುಖ್ಯಮಂತ್ರಿ ಪ್ರಮೊಧ ಸಾವಂತರವರು ಗೋವಾ ಕನ್ನಡಿಗರ ಪರವಾಗಿ ಪ್ರಶಸ್ತಿ ಪ್ರಧಾನ ಮಾಡಿ ಸನ್ಮಾನಿಸಿದರು.
ಜಮೀಲ್ ಅಹ್ಮದ ರವರು ಕೊಪ್ಪಳ ಜಿಲ್ಲೆಯ ಕನಕಗಿರಿ ಹಾಗೂ ಗಂಗಾವತ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಉತ್ತಮ ಸೇವೆ ಮತ್ತು ಗ್ರಾಮಿಣಾಭಿವೃದ್ಧಿ ಹಾಗೂ ಪಂಚಾಯತರಾಜ ಕ್ಷೇತ್ರಲ್ಲಿನ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು, ಈ ಸಂದರ್ಭದಲ್ಲಿ ಕೇಂಧ್ರದ ಆಯುಶ ಇಲಾಖೆ ಮಂತ್ರಿ ಪ್ರಮೊಧ ನಾಯ್ಕೆ, ಬಿಚ್ಚೊಲಿ ಮಾಯಂ ಕ್ಷೇತ್ರದ ಶಾಸಕ ರಾಜೇಶ ಪಾಟ್ನೇಕರ್, ಸಮ್ಮೇಳನದ ಸರ್ವಾಧ್ಯಕ್ಷ ಡಾ. ವಿ.ಆರ್.ತಾಳಿಕೋಟಿ, ಕರ್ಮ ಭೂಮಿ ಕನ್ನಡ ಸಂಘ, ಗೋವಾದ ಅಧ್ಯಕ್ಷ ಹನುಮಂತ ರೆಡ್ಡಿ ಶಿರೂರ್, ಗೋವಾ ಕನ್ನಡಿಗರ ನಾಯಕ ಸಿದ್ದಣ್ಣ ಮೇಟಿ, ಬಿಚ್ಚೋಲಿ ನಗರಸಭೆ ಅಧ್ಯಕಕ್ಷ ಸತೀಷ್ ಗಾಂವ್ಕರ್, ಮಾಜಿ ಶಾಸಕ ನರೇಶ್ ಸಾವಾಳ್, ಸಂಘಟಕ ಮಹೇಶ ಸುರ್ವೆ ಹಾಗೂ ತಿರುಳುಗನ್ನಡ ಸಾಹಿತ್ಯ ಪರತಿಷ್ಠಾನದ ಜಿಲ್ಲಾಧ್ಯಕ್ಷ ಎಂ. ಸಾದಿಕ ಅಲಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 