ಕರುಣಾನಿಧಿ ಆರೋಗ್ಯ ಗಂಭೀರ
ಚೆನ್ನೈ: ಡಿಎಂಕೆ ಪಕ್ಷದ ಅಧಿನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಂ ಕರುಣಾನಿಧಿ ಅವರ ಆರೋಗ್ಯ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.
ಜ್ವರ, ಮೂತ್ರನಾಳ ಸೋಂಕಿನಿಂದ ಬಳಲಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿರುವ ಎಂ ಕರುಣಾನಿಧಿ ಅವರ ಆರೋಗ್ಯದಲ್ಲಿ 'ಗಂಭೀರ ವ್ಯತ್ಯಯ'ವಾಗಿದೆ ಎಂದು ಕಾವೇರಿ ಆಸ್ಪತ್ರೆ ಆಡಳಿತ ಮಂಡಳಿ ಮಾಹಿತಿ ನೀಡಿದೆ. ಅಲ್ಲದೆ ಕರುಣಾನಿಧಿ ಅವರಿಗೆ ನೀಡಲಾಗುತ್ತಿರುವ ಚಿಕಿತ್ಸೆ ಮುಂದುವರೆಸಲಾಗಿದ್ದು, ಅವರು ಮತ್ತೊಂದಷ್ಟು ದಿನಗಳ ಕಾಲ ಆಸ್ಪತ್ರೆಯಲ್ಲಿಯೇ ಇರಬೇಕಾಗುತ್ತದೆ ಎಂದು ಹೇಳಿದೆ.
ಅಂತೆಯೇ ಅವರ ಅಭಿಮಾನಿಗಳಿಗೂ ಕಿವಿ ಮಾತು ಹೇಳಿರುವ ಆಸ್ಪತ್ರೆ ಆಡಳಿತ ಮಂಡಳಿ ಆಸ್ಪತ್ರೆಯಲ್ಲಿ ಕುರುಣಾನಿಧಿ ಅವರಿಗೆ ಅತ್ಯುನ್ನತ ಮಟ್ಟದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸ್ಪಷ್ಟ ಪಡಿಸಿದೆ.
ಇನ್ನು ಕರುಣಾನಿಧಿ ಅರೋಗ್ಯ ಸುಧಾರಿಸಲಿ ಎಂದು ಹಾರೈಸಿ ಆಸ್ಪತ್ರೆ ಆವರಣದಲ್ಲೇ ಮೊಕ್ಕಾಂ ಹೂಡಿರುವ ಅವರ ಅಭಿಮಾನಿಗಳಿಗೆ ಈ ಸುದ್ದಿ ಆತಂಕಕ್ಕೆ ಕಾರಣವಾಗಿದೆ.
ನಿನ್ನೆಯಷ್ಟೇ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಚೆನ್ನೈನ ಕಾವೇರಿ ಆಸ್ಪತ್ರೆಗೆ ಆಗಮಿಸಿ ಕರುಣಾನಿಧಿ ಅವರ ಆರೋಗ್ಯ ವಿಚಾರಿಸಿದ್ದರು.
2016ರಿಂದಲೂ ಕರುಣಾನಿಧಿ ವಯೋ ಸಹಜ ಆನಾರೋಗ್ಯಕ್ಕೆ ತುತ್ತಾಗಿ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 