ದೇವೇಗೌಡರು ಪ್ರಧಾನಿಯಾಗಲು ಪ್ರಮುಖ ಕಾರಣರಾಗಿದ್ದ ರಾಜಕಾರಣಿ ಕರುಣಾನಿಧಿ: ಸಿಎಂ
ಬೆಂಗಳೂರು,ಆ.08 ಕಿರುವಾಗಲೇ ದಂತ ಕಥೆಯಂತಿದ್ದ ದಕ್ಷಿಣ ಭಾರತ ಪ್ರಮುಖ ಮುತ್ಸದ್ಧಿ ರಾಜಕಾರಣಿ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ ಜೀವಾತಾವಧಿ ಪೂರ್ಣ ತಮಿಳುನಾಡು ಅಭಿವೃದ್ಧಿಗೆ ಶ್ರಮಿಸಿದ ಕರುಣಾನಿಧಿ ಅವರು ಪ್ರಾದೇಶಿಕ ಪಕ್ಷವನ್ನು ಸದೃಢಗೊಳಿಸುವಲ್ಲಿ ಪ್ರದಶರ್ಿಸಿದ ಮುತ್ಸದ್ದಿತನ ವೈಶಿಷ್ಠಪೂರ್ಣ. ದೀನ ದಲಿತರ ಪರವಾಗಿ ಜನಪರ ಕಾರ್ಯಗಳನ್ನು ಜಾರಿಗೆ ತಂದ ಕರುಣಾನಿಧಿ ಐದು ಬಾರಿ ಮುಖ್ಯಮಂತ್ರಿ ತಮಿಳುನಾಡಿನ ಅಭಿವೃದ್ದಿಗೆ ದೊಡ್ಡಮಟ್ಟದ ಕೊಡುಗೆ ನೀಡಿದ್ದಾರೆ.
ಹಲವು ಕರುಣಾನಿಧಿ ಅವರನ್ನು ನಾವು ಭೇಟಿ ಮಾಡಿದ್ದು, ಆ ಸಂದರ್ಭದಲ್ಲಿ ಪ್ರಾದೇಶಿಕ ಪಕ್ಷಗಳ ಮಹತ್ವವನ್ನು ಮನವರಿಕೆ ಮಾಡಿಕೊಡುತ್ತಿದ್ದರು. ಹಿಂದುಳಿದ ವರ್ಗ ಹಾಗೂ ತುಳಿತಕ್ಕೆ ಒಳಗಾದವರ ಬಗ್ಗೆ ಅವರು ಜಾರಿಗೆ ತಂದ ಜನಪ್ರಿಯ ಯೋಜನೆಗಳನ್ನು ದೇಶದ ವಿವಿಧ ರಾಜ್ಯಗಳು ಅನುಸರಿಸುತ್ತಿವೆ. ಕನ್ನಡಿಗ ಎಚ್.ಡಿ.ದೆವೇಗೌಡರು ಪ್ರಧಾನಿಯಾಗಲು ಕರುಣಾನಿಧಿ ಅವರ ಪಾತ್ರ ಪ್ರಮುಖವಾಗಿತ್ತು ಎಂದು ಸ್ಮರಿಸಿದ್ದಾರೆ.
ಚಿತ್ರರಂಗದ ಮೂಲಕ ರಾಜಕೀಯಕ್ಕೆ ಬಂದ ಅವರು ತಮಿಳುನಾಡಿನ ಶೋಷಿತ ವರ್ಗಕ್ಕೆ ಗಟ್ಟಿ ದನಿಯಾಗಿದ್ದರು. ಅವರ ರಾಜಕೀಯ ಸಿದ್ದಾಂತ ನಮ್ಮೆಲ್ಲರಿಗೂ ಮಾದರಿಯಾಗಿದೆ. ಭಾರತದ ರಾಜಕೀಯ ರಂಗದಲ್ಲಿ ವೈಶಿಷ್ಠಪೂರ್ಣ ವ್ಯಕ್ತಿತ್ವವೊಂದು ಕಣ್ಮರೆಯಾಗಿದ್ದು, ತಮಿಳುನಾಡು ಒಬ್ಬ ದಾರ್ಶನಿಕನನ್ನು ಕಳೆದುಕೊಂಡಿದೆ ಎಂದು ಮುಖ್ಯಮಂತ್ರಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 