ಕಡಲ ಕೊರೆತ ಪ್ರದೇಶಕ್ಕೆ ವಿ. ಪ. ಸದಸ್ಯ ಉಳ್ವೇಕರ್ ಮತ್ತು ಡಿಸಿ ಲಕ್ಷ್ಮೀಪ್ರಿಯಾ ಭೇಟಿ
Karwar News- 08-07
ಕಾರವಾರ 08: ಕಳೆದ ಒಂದು ವಾರದಿಂದ ಕಾರವಾರ ತಾಲೂಕಿನ ಹಾರವಾಡ ಕಡಲ ತೀರದಲ್ಲಿ ಸಮುದ್ರದ ಕೊರತೆ ತೀವೃಗೊಂಡಿದ್ದು, ಕಡಲ ಆರ್ಭಟಕ್ಕೆ ತಡೆಗೋಡೆ, ಉಸುಕಿನ ದಿಬ್ಬಗಳು ಸಹ ನೀರು ಪಾಲಾಗುತ್ತಿರುವ ಹಿನ್ನಲೆ ಮಂಗಳವಾರ ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ ಅವರು ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರೀಯಾ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಕಡಲ ಕೊರೆತ ಸಮಸ್ಯೆಯ ಬಗ್ಗೆ ಸೋಮವಾರ ಹಾರವಾಡ ಗ್ರಾಮಸ್ಥರು, ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ ಅವರಿಗೆ ಮನವಿ ಮಾಡಿದ್ದರು. ಈ ವಿಷಯದ ಬಗ್ಗೆ ಕೂಡಲೇ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದರು. , ಈ ಸಂಬಂಧ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಸಮಸ್ಯೆಗೆ ಸ್ಪಂದಿಸಿ, ಮಂಗಳವಾರ ಬಂದರು ಇಲಾಖೆ ಅಧಿಕಾರಿಗಳು ಹಾಗೂ ಅಂಕೋಲಾ ತಹಶಿಲ್ದಾರ್ ಮೀನುಗಾರಿಕಾ ಇಲಾಖೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ಮೀನುಗಾರರ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.ಸಮುದ್ರ ಕೊರತೆ ನಿಯಂತ್ರಿಸಲು ಹಾಗೂ ತಡೆಗೋಡೆ ಕಾಮಗಾರಿಯನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸುವಂತೆ ಬಂದರು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು....
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 