ಕಡಲ ಕೊರೆತ ಪ್ರದೇಶಕ್ಕೆ ವಿ. ಪ. ಸದಸ್ಯ ಉಳ್ವೇಕರ್ ಮತ್ತು ಡಿಸಿ ಲಕ್ಷ್ಮೀಪ್ರಿಯಾ ಭೇಟಿ
Karwar News- 08-07
ಕಾರವಾರ 08: ಕಳೆದ ಒಂದು ವಾರದಿಂದ ಕಾರವಾರ ತಾಲೂಕಿನ ಹಾರವಾಡ ಕಡಲ ತೀರದಲ್ಲಿ ಸಮುದ್ರದ ಕೊರತೆ ತೀವೃಗೊಂಡಿದ್ದು, ಕಡಲ ಆರ್ಭಟಕ್ಕೆ ತಡೆಗೋಡೆ, ಉಸುಕಿನ ದಿಬ್ಬಗಳು ಸಹ ನೀರು ಪಾಲಾಗುತ್ತಿರುವ ಹಿನ್ನಲೆ ಮಂಗಳವಾರ ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ ಅವರು ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರೀಯಾ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಕಡಲ ಕೊರೆತ ಸಮಸ್ಯೆಯ ಬಗ್ಗೆ ಸೋಮವಾರ ಹಾರವಾಡ ಗ್ರಾಮಸ್ಥರು, ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ ಅವರಿಗೆ ಮನವಿ ಮಾಡಿದ್ದರು. ಈ ವಿಷಯದ ಬಗ್ಗೆ ಕೂಡಲೇ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದರು. , ಈ ಸಂಬಂಧ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಸಮಸ್ಯೆಗೆ ಸ್ಪಂದಿಸಿ, ಮಂಗಳವಾರ ಬಂದರು ಇಲಾಖೆ ಅಧಿಕಾರಿಗಳು ಹಾಗೂ ಅಂಕೋಲಾ ತಹಶಿಲ್ದಾರ್ ಮೀನುಗಾರಿಕಾ ಇಲಾಖೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ಮೀನುಗಾರರ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.ಸಮುದ್ರ ಕೊರತೆ ನಿಯಂತ್ರಿಸಲು ಹಾಗೂ ತಡೆಗೋಡೆ ಕಾಮಗಾರಿಯನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸುವಂತೆ ಬಂದರು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು....
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 