ಕಾರವಾರ ಜಿಲ್ಲಾ ಆಸ್ಪತ್ರೆಯ ಸರ್ಜನ್ ಶಿವಾನಂದ ಕುಡ್ತಲಕರ್ ಲೋಕಾಯುಕ್ತ ಬಲೆಗೆ
Karwar district hospital surgeon Shivananda Kudthalakar Lokayukta trap
ಕಾರವಾರ 10 : ಆಸ್ಪತ್ರೆಗೆ ಹಾಸಿಗೆ ಸಪ್ಲೈ ಮಾಡುವ ಗುತ್ತಿಗೆದಾರರೊಬ್ಬರಿಂದ ಲಂಚ ಪಡೆಯುತ್ತಿದ್ದ ವೇಳೆ ಕಾರವಾರ ಮೆಡಿಕಲ್ ಕಾಲೇಜು ಅಧೀನ ಜಿಲ್ಲಾ ಆಸ್ಪತ್ರೆಯ ಆಡಳಿತಾಧಿಕಾರಿ, ಹೆರಿಗೆ ಡಾಕ್ಟರ್ ಶಿವಾನಂದ ಕುಡ್ತಲಕರ್ ಗುರುವಾರ ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ನಡೆದಿದೆ.
ಕಾರವಾರ ಲೋಕಾಯುಕ್ತರ ಬಲೆ ಬಿದ್ದಿರುವ ಶಿವಾನಂದ ಕುಡ್ತಲಕರ್ ಗುತ್ತಿಗೆದಾರರೊಬ್ಬರ ಬಳಿ 50,000 ರೂಪಾಯಿ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.ಆಸ್ಪತ್ರೆಯ ರೋಗಿಗಳ ಹಾಸಿಗೆ ಟೆಂಡರ್ 3.5 ಲಕ್ಷದ ಬಿಲ್ ಪಾವತಿಸಲು 75000 ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ನಿನ್ನೆ 20000 ಲಂಚ ಪಡೆದಿದ್ದರು. ಇಂದು 30 ಸಾವಿರ ಲಂಚದ (ಕಮಿಷನ್ ) ಹಣ ಪಡೆಯುವಾಗ ಲೋಕಾಯುಕ್ತ ಡಿಎಸ್ಪಿ ಧನ್ಯಾ ನಾಯ್ಕ ಹಾಗೂ ತಂಡ ದಾಳಿ ಮಾಡಿ ಕುಡ್ತಲಕರ್ ಅವರನ್ನು ಹಿಡಿದಿದ್ದಾರೆ.ಅಂಕೋಲಾ ಮೂಲದ ಗುತ್ತಿಗೆದಾರ ಮೌಸೀನ್ ಅಹ್ಮದ್ ಶೇಖ್ ಎಂಬುವವರು ಲೋಕಾಯುಕ್ತಕ್ಕೆ ಈ ಸಂಬಂಧ ದೂರು ನೀಡಿದ್ದರು. ನಿನ್ನೆ ರಾತ್ರಿ 20,ಸಾವಿರ ಹಣ ನೀಡಲಾಗಿತ್ತು. ಇಂದು 30 ಸಾವಿರ ರೂಪಾಯಿ ಕೇಳಿದ್ದು, ಈ ವೇಳೆ ವೈದ್ಯನ ಕಾಟ ತಾಳಲಾರದೆ, ಉಳಿದ 30 ಸಾವಿರ ರೂಪಾಯಿ ಹಣವನ್ನು ಭ್ರಷ್ಟ ವೈದ್ಯ , ಕುಡ್ತಲಕರ್ ಗೆ ನೀಡಿದರು. ಲಂಚದ ಹಣ ಸ್ವಿಕರಿಸುವಾಗ ರೆಡ್ ಹ್ಯಾಂಡ್ ಆಗಿ ಡಾ. ಶಿವಾನಂದ ಕುಡಲ್ತಕರ್ ಸಿಕ್ಕಿಬಿದ್ದಿದ್ದಾರೆ.ಕಾರವಾರ ಲೋಕಾಯುಕ್ತ ಡಿವೈಎಸ್ಪಿ ಧನ್ಯಾ ನಾಯ್ಕ್ ನೇತೃತ್ವದಲ್ಲಿ , ಅವರ ಸಿಬ್ಬಂದಿ ಈ ದಾಳಿ ನಡೆಸಿದರು .ಪ್ರಕರಣ ದಾಖಲಿಸುವ ಪ್ರಕ್ರಿಯೆ ಮುಂದುವರಿದಿದೆ.ಸಂಜೆ ನ್ಯಾಯಾಲಯಕ್ಕೆ ಆರೋಪಿ ವೈದ್ಯ ಕುಡ್ತಲಕರ್ ರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಲಿದ್ದಾರೆ. ವಿವಾದಾತ್ಮಕ ಇತಿಹಾಸ ಹೊಂದಿದ್ದ ಕುಡ್ತಲಕರ್ ಮೇಲೆ ಹೆರಿಗೆ ಸಂದರ್ಭದಲ್ಲಿ ನಿರ್ಲಕ್ಷ್ಯ ದಿಂದ ಬಾಣಂತಿ ಸಾವಿಗೆ ಕಾರಣದ ಆರೋಪ ಬಂದಿತ್ತು. ಇವರ ವರ್ಗಾವಣೆಗೆ ಆಗ್ರಹಿಸಿ ವಿವಿಧ ಸಂಘಟನೆಗಳು ಜಿಲ್ಲಾಧಿಕಾರಿ ಕಚೇರಿ ಬಳಿ ಮೂರು ವರ್ಷಗಳ ಹಿಂದೆ ಪ್ರತಿಭಟನೆ ಮಾಡಿದ್ದವು.
ಹಿಂದಿನ ಸರ್ಕಾರದಲ್ಲಿ ಆರೋಗ್ಯ ಸಚಿವರ ಪ್ರಭಾವಬಳಸಿ ಕಾರವಾರದ ಜಿಲ್ಲಾ ಆಸ್ಪತ್ರೆಯಲ್ಲಿ ಉಳಿದಿದ್ದರು. ಇವರು ಮೂಲತಃ ಕಾರವಾರದ ನಿವಾಸಿಯಾಗಿದ್ದು , ಇಡೀ ಮೆಡಿಕಲ್ ಕಾಲೇಜನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಸತತ ಪ್ರಯತ್ನ ಮಾಡಿ ಯಶಸ್ವಿಯಾಗಿದ್ದರು. ಈಗ ಲಂಚಬಾಕತನಕ್ಕೆ ಬಲಿಬಿದ್ದಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 