ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಕರವೇ ಕಾರ್ಯಕರ್ತರು ಶ್ರಮಪಡಬೇಕು - ಜ್ಞಾನಸುಂದರ
Karya activists should work hard for the all-round development of the village - Gyanasundara
ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಕರವೇ ಕಾರ್ಯಕರ್ತರು ಶ್ರಮಪಡಬೇಕು - ಜ್ಞಾನಸುಂದರ
ಕೊಪ್ಪಳ 07 : ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಕರವೇ ಕಾರ್ಯಕರ್ತರು ಶ್ರಮಪಡಬೇಕು ಎಂದು ಕರವೇ ಜಿಲ್ಲಾಧ್ಯಕ್ಷ ಬಿ.ಗೀರೀಶಾನಂದ ಜ್ಞಾನಸುಂದರ ಕರೆನೀಡಿದರು. ಅವರು ಗುರುವಾರದಂದು ಕರ್ನಾಟಕ ರಕ್ಷಣಾ ವೇದಿಕೆ ಹೊರತಟ್ನಾಳ ಗ್ರಾಮ ಶಾಖೆಯ ಪದಾಧಿಕಾರಿಗಳ ಆಯ್ಕೆ ಸಭೆಯ ನೇತೃತ್ವವಹಿಸಿ ಮಾತನಾಡಿದರು.ಕನ್ನಡ ನಾಡು ನುಡಿ, ನೆಲ ಜಲ, ಗಡಿ ಬಾಷೆಯ ಸಂಸ್ಕೃತಿ ಜೋತೆಗೆ ಗ್ರಾಮೀಣ ಪ್ರದೇಶದಲ್ಲಿ ಸಾಕಷ್ಟು ಮೂಲಭೂತ ಸಮಸ್ಯೆಗಳಿದ್ದು, ಅವುಗಳ ಪರಿಹಾರಕ್ಕಾಗಿ ಜನಪರ ಹೋರಾಟವನ್ನು ರೂಪಿಸಿ ಪರಿಹಾರ ಕಂಡುಕೊಳ್ಳಬೇಕು. ಹಳ್ಳಿ ಅಭಿವೃದ್ಧಿಯಾದರೆ ದೇಶವೇ ಅಭಿವೃದ್ಧಿಯಾದಂತೆ ಆ ನಿಟ್ಟಿನಲ್ಲಿ ನೂತನವಾಗಿ ನೇಮಕವಾದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾರ್ಯಪ್ರವೃತ್ತರಾಗಬೇಕು ಎಂದರು.ಸಭೆಯ ಅಧ್ಯಕ್ಷತೆಯನ್ನು ಕೊಪ್ಪಳ ತಾಲೂಕಾಧ್ಯಕ್ಷ ಗವಿಸಿದ್ದಪ್ಪ ಚಕ್ಕಡಿ ವಹಿಸಿದ್ದರು.
ಹೊರತಟ್ನಾಳ ಗ್ರಾಮ ಶಾಖೆಯ ನೂತನ ಅಧ್ಯಕ್ಷರಾಗಿ ಆನಂದ ಗೌಡರ, ಉಪಾಧ್ಯಕ್ಷರಾಗಿ ಗುರುರಾಜ ಅಂಗಡಿ, ಮುತ್ತಣ್ಣ ಕುಟುಗನಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಭೀಮಪ್ಪ ಕುಟಗನಳ್ಳಿ, ಸಂಘಟನಾ ಕಾರ್ಯದರ್ಶಿಯಾಗಿ ಮುತ್ತಣ್ಣ ಅರಕೇರಿ, ಅಮರೇಶ ಕಿಟಗೇರಿ, ಕಾರ್ಯದರ್ಶಿಯಾಗಿ ಈರಣ್ಣ ಓಜನಳ್ಳಿ, ಹನುಮಪ್ಪ ಕಿಟಗೇರಿ, ಖಜಾಂಚಿಯಾಗಿ ಗವಿಸಿದ್ದಪ್ಪ ಕೊಪ್ಪಳ ಅವರು ನೇಮಕವಾದರು. ನೂತನ ಪದಾಧಿಕಾರಿಗಳಿಗೆ ಶಾಲು ಮತ್ತು ಕನ್ನಡದ ಬಾವೂಟ ನೀಡುವ ಮುಖಾಂತರ ಸಂಘಟನೆಗೆ ಸ್ವಾಗತಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 