ಕಾಶಿಬಾಯಿ ಬಿರಾದಾರ ಅವರ ವಯೋನಿವೃತ್ತಿ: ಬೀಳ್ಕೊಡುಗೆ ಸಮಾರಂಭ
Kashibai Biradar's retirement: Farewell ceremony
ವಿಜಯಪುರ 31: ನಗರದ ಬಿ ಲ್ ಡಿ ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ದಿ. 30 ಶನಿವಾರದಂದು ಮಹಾವಿದ್ಯಾಲಯದ ಬೋಧಕೇತರ ಸಿಬ್ಬಂದಿ ಕಾಶಿಬಾಯಿ ಬಿರಾದಾರ ಅವರ ವೃತ್ತಿಯಿಂದ ನಿವೃತ್ತಿಹೊಂದಿದ ಹಿನ್ನೆಲೆ ಬೀಳ್ಕೊಡುಗೆ ಸಮಾರಂಭ ನಡೆಯಿತು.ಈ ವೇಳೆಯಲ್ಲಿ ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ಧೆ ಮಾತನಾಡಿ ನಮ್ಮ ಮಹಾವಿದ್ಯಾಲಯದಲ್ಲಿ ಅತ್ಯಂತ ಕರ್ತವ್ಯ ನಿಷ್ಠೆಯಿಂದ, ಯಾವುದೆ ನ್ಯೂನ್ಯತೆ ಇಲ್ಲದೆ, ಪ್ರಾಮಾಣಿಕತೆಯಿಂದ ಸಂಸ್ಥೆಯಲ್ಲಿ ತಿಕೋಟಾದಿಂದ ವೃತ್ತಿ ಪ್ರಾರಂಭಿಸಿ ನಮ್ಮ ಮಹವಿದ್ಯಾಲಯ ಸೇರಿಂದಂತೆ ಒಟ್ಟು 31 ವರ್ಷಗಳ ತಮ್ಮ ಸೇವೆಯನ್ನು ಗೈದಿದ್ದಾರೆ ಇವರ ನಿವೃತ್ತಿ ಜೀವನದ ಸುಖಕರವಾಗಿ ಸಾಗಲೆಂದು ಶುಭ ಹಾರೈಸಿದರು.
ಈ ವೇಳೆಯಲ್ಲಿ ಎಲ್ ಎಸ್ ಪೂಜಾರಿ, ದುಲಂಗೆ ಮಾತನಾಡಿದರು. ಮಹಾವಿದ್ಯಾಲಯದಿಂದ ಕಾಶಿಬಾಯಿ ಬಿರಾದಾರ ದಂಪತಿಗಳಿಗೆ ಸನ್ಮಾಸಿಲಾಯಿತು.
ಈ ಸಂದರ್ಭಲ್ಲಿ ಬಿಎಲ್ಡಿಇ ಸಂಸ್ಥೆಯ ಕಛೇರಿ ನಿವೃತ್ತ ಅಧೀಕ್ಷಕರು ಎಸ್.ಕೆ ಬಿರಾದಾರ, ಕೆ.ಕೆ.ಪಾಟೀಲ, ಉಪ್ರಾಚಾರ್ಯ ಡಾ.ಅನೀಲ.ಭೀ,ನಾಯಕ, ಐಕ್ಯೂಎಸಿ ನಿರ್ದೇಶಕ ಡಾ.ಪಿ.ಎಸ್ ಪಾಟೀಲ, ಕಛೇರಿ ಆಧೀಕ್ಷಕ ಎಸ್.ಬಿ.ಹೇರಲಗಿ, ಜಗದೀಶ ಪಾಟೀಲ ಸೇರಿದಂತೆ ಇನ್ನಿತರ ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ಇದ್ದರು.ಡಾ.ಉಷಾದೇವಿ ಹಿರೇಮಠ ನಿರೂಪಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 