ಕಾಶ್ಮೀರ ವಿವಾದ : ರಾಗ ಬದಲಿಸಿದ ಚೀನಾ
ನವದೆಹಲಿ, ಅ 9: ಭಾರತ - ಚೀನಾ ನಡುವೆ ಎರಡನೇ ಶೃಂಗಸಭೆ ನಡೆಯಲು ಕೆಲವೇ ಕೆಲವು ಗಂಟೆಗಳು ಬಾಕಿ ಇರುವಾಗಲೇ ಕಾಶ್ಮೀರ ವಿಚಾರ ಕುರಿತು ಚೀನಾ ತನ್ನ ರಾಗ ಬದಲಿಸಿದೆ. ಚೀನಾ ಅಧ್ಯಕ್ಷ ಕ್ಸಿ ಜಿಂಗ್ ಪಿನ್ ಹಾಗೂ ಪ್ರಧಾನಿ ಮೋದಿ ನಡುವೆ ಎರಡನೇ ಭಾರತ - ಚೀನಾ ಶೃಂಗಸಭೆ ನಡೆಯಲಿದೆ. ಇದಕ್ಕಾಗಿ ಎಲ್ಲಾ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಶೃಂಗಸಭೆಗೂ ಮುನ್ನವೇ ಕಾಶ್ಮೀರ ವಿವಾದ ಕುರಿತಂತೆ ಭಾರತ ಮತ್ತು ಪಾಕಿಸ್ತಾನ ನೇರವಾಗಿ ಮಾತುಕತೆ ನಡೆಸುವ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು ಮತ್ತು ಜನರ ನಡುವಿನ ಅಪನಂಬಿಕೆಯನ್ನು ದೂರ ಮಾಡಲು ಎರಡೂ ರಾಷ್ಟ್ರಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಚೀನಾ ಒತ್ತಾಯ ಮಾಡಿದೆ. ಜಮ್ಮು - ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ವಾಪಸ್ ಪಡೆದುಕೊಂಡ ನಂತರ ಚೀನಾ, ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನದ ಪರವಾಗಿಯೇ ತನ್ನ ನಿಲುವು ವ್ಯಕ್ತಪಡಿಸಿತ್ತು. ಆದರೀಗ ಚೀನಾ ಅಧ್ಯಕ್ಷರೇ ಭಾರತಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಚೀನಾ ತನ್ನ ವರಸೆ ಬದಲಿಸಿದೆ. ಈ ನಡುವೆ ಶೃಂಗಸಭೆಗೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದು ಮಾಮಲ್ಲಾಪುರಂನಲ್ಲಿ ಹಿಂದೆಂದೂ ಕಾಣದಷ್ಟು ಬಿಗಿಭದ್ರತೆ ಏರ್ಪಡಿಸಲಾಗಿದೆ. ಮೂರು ದಿನಗಳ ಹಿಂದೆ ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಭೇಟಿ ನೀಡಿ ಸಿದ್ಧತೆಗಳ ಪರಿಶೀಲನೆ ನಡೆಸಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 