ನೋಟಿಸ್ಗೆ ಪ್ರತಿಕ್ರಿಯಿಸದ ಯತ್ನಾಳ್ಗೆ ಕಟೀಲ್ ಎಚ್ಚರಿಕೆ
ಯಾದಗಿರಿ, ಅಕ್ಟೋಬರ್ 17: ಪಕ್ಷದ ಶಿಸ್ತು ಸಮಿತಿ ನೀಡುವ ಪ್ರತಿ ನೋಟಿಸ್ಗೆ ಉತ್ತರಿಸುವುದು ಪ್ರತಿಯೊಬ್ಬ ಪಕ್ಷದ ಕಾರ್ಯಕರ್ತರ ಕರ್ತವ್ಯ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ವಿಜಯಪುರದ ಬಿಜೆಪಿ ಶಾಸಕ ಬಸವರಾಜ್ ಪಾಟೀಲ್ ಯತ್ನಾಳ್ ಅವರು ಪ್ರವಾಹ ಪರಿಹಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟ್ವೀಟ್ ಮಾಡಿದ್ದಕ್ಕಾಗಿ ಅವರಿಗೆ ಪಕ್ಷ ನೀಡಿದ್ದ ಶೋಕಾಸ್ ನೋಟಿಸ್ಗೆ ಸ್ಪಂದಿಸದ ಬೆನ್ನಲ್ಲೇ ಕಟೀಲ್ ಈ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕಟೀಲ್, ಯತ್ನಾಳ್ ಅವರ ಚಟುವಟಿಕೆಗಳನ್ನು ರಾಷ್ಟ್ರೀಯ ನಾಯಕತ್ವದಿಂದ ಮೇಲ್ವಿಚಾರಣೆ ಮಾಡಲಾಗುತ್ತದೆ ಮತ್ತು ಚೆಂಡು ಅವರ ಕೈಯ್ಯಲ್ಲಿರುವುದರಿಂದ ಯಾವ ಕ್ರಮ ಬೇಕು ಎಂದು ಅವರು ನಿರ್ಧರಿಸುತ್ತಾರೆ
ನೋಟಿಸ್ಗೆ ಪ್ರತಿಕ್ರಿಯಿಸಲು ಯತ್ನಾಳ್ ವಿಫಲವಾದರೆ ಕ್ರಮ ತೆಗೆದುಕೊಳ್ಳಬಹುದು ಎಂದರು.
ಇದಲ್ಲದೆ, ನೋಟಿಸ್ಗೆ ಪ್ರತಿಕ್ರಿಯಿಸಿದಿರುವುದು ದುರಹಂಕಾರವಾಗುತ್ತದೆ ಎಂದು ಕಟೀಲ್ ಹೇಳಿದರು.
ಕಳೆದ ವಾರ ರಾಜ್ಯದ ಪ್ರವಾಹ ಪರಿಸ್ಥಿತಿಯ ಬಗ್ಗೆ ಕೇಂದ್ರದ 'ಅಸಡ್ಡೆ ವರ್ತನೆ'ಯನ್ನು ಯತ್ನಾಳ್ ಟೀಕಿಸಿ ತಮ್ಮದೇ ಪಕ್ಷವನ್ನು ಮುಜುಗರಕ್ಕೀಡು ಮಾಡಿದ್ದರು. ಇದರ ಬೆನ್ನಲ್ಲೇ ಪಕ್ಷದ ಶಿಸ್ತಿನ ಸಮಿತಿಯು ನೋಟಿಸ್ ನೀಡಿದ್ದು, ಬಿಜೆಪಿಯ ಶಿಸ್ತಿನ ಮಾನದಂಡಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಿರುವ ಅವರ ಕ್ರಮಕ್ಕೆ ಉತ್ತರ ಕೋರಿತ್ತು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕಟೀಲ್, 'ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಿರಿಯ ನಾಯಕ ಮತ್ತು ಅವರು ಮತ್ತು ನನ್ನ ನಡುವೆ ಯಾವುದೇ ತಪ್ಪು ತಿಳುವಳಿಕೆ ಅಥವಾ ಭಿನ್ನಾಭಿಪ್ರಾಯಗಳಿಲ್ಲ' ಎಂದು ಅವರು ಹೇಳಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 