ಕತ್ತೆಬೆನ್ನೂರು : ಮೆಕ್ಕೆಜೋಳ ರಾಶಿ ಬೆಂಕಿಗಾಹುತಿ
Kattebennur: Maize piles catch fire
ಲೋಕದರ್ಶನ ವರದಿ
ಹೂವಿನಹಡಗಲಿ 13: ವಿದ್ಯುತ್ ಕಿಡಿಯ ತಗುಲಿ ಮೆಕ್ಕೆಜೋಳ ರಾಶಿ ಸಂಪೂರ್ಣ ಬೆಂಕಿಯಿಂದ ಸುಟ್ಟು ಕರಕಲಾದ ಘಟನೆ ತಾಲ್ಲೂಕಿನ ಕತ್ತೆಬೆನ್ನೂರು ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.ಸುಮಾರು 9ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಬೆಳೆಯ ರಾಶಿಗೆ ಬೆಂಕಿಗಾಹುತಿಯಾಗಿದೆ. ನೀಲಗುಂದ ಗುರುವಣ್ಣ ಅವರಿಗೆ ಸೇರಿದ ಮೆಕ್ಕೆಜೋಳ ರಾಶಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸಮೀಪದ ಖಾಲಿ ಸ್ಥಳದಲ್ಲಿ ರಾಶಿ ಹಾಕಿದ್ದರು. ಗುರುವಾರ ಮಧ್ಯಾಹ್ನ ಮೆಕ್ಕೆಜೋಳ ರಾಶಿಯಲ್ಲಿ ಹೊಗೆ ಬರುವುದನ್ನು ಕಂಡು ಸ್ಥಳೀಯರು ರಾಶಿಯ ಬಳಿ ತೆರಳಿ ನೋಡಿದಾಗ ಬೆಂಕಿ ಹತ್ತಿರುವುದು ತಿಳಿದಿದ್ದು ಕೂಡಲೇ ಹತ್ತಿರದಲ್ಲಿದ್ದ ನೀರನ್ನು ತಂದು ಹಾಕಿದರಾದರೂ ರಾಶಿಗೆ ಬೆಂಕಿ ಹೆಚ್ಚಿನ ಪ್ರಮಾಣದಲ್ಲಿ, ಆವರಿಸಿಕೊಂಡಿದ್ದರಿಂದ ಸುಮಾರು 200 ಕ್ವಿಂಟಲ್ನಷ್ಟು ಮೆಕ್ಕೆಜೋಳ ಸಂಪೂರ್ಣವಾಗಿ ಸುಟ್ಟು ಕರುಕಲಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 