ಕತ್ತೆಬೆನ್ನೂರು : ಮೆಕ್ಕೆಜೋಳ ರಾಶಿ ಬೆಂಕಿಗಾಹುತಿ
Kattebennur: Maize piles catch fire
ಲೋಕದರ್ಶನ ವರದಿ
ಹೂವಿನಹಡಗಲಿ 13: ವಿದ್ಯುತ್ ಕಿಡಿಯ ತಗುಲಿ ಮೆಕ್ಕೆಜೋಳ ರಾಶಿ ಸಂಪೂರ್ಣ ಬೆಂಕಿಯಿಂದ ಸುಟ್ಟು ಕರಕಲಾದ ಘಟನೆ ತಾಲ್ಲೂಕಿನ ಕತ್ತೆಬೆನ್ನೂರು ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.ಸುಮಾರು 9ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಬೆಳೆಯ ರಾಶಿಗೆ ಬೆಂಕಿಗಾಹುತಿಯಾಗಿದೆ. ನೀಲಗುಂದ ಗುರುವಣ್ಣ ಅವರಿಗೆ ಸೇರಿದ ಮೆಕ್ಕೆಜೋಳ ರಾಶಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸಮೀಪದ ಖಾಲಿ ಸ್ಥಳದಲ್ಲಿ ರಾಶಿ ಹಾಕಿದ್ದರು. ಗುರುವಾರ ಮಧ್ಯಾಹ್ನ ಮೆಕ್ಕೆಜೋಳ ರಾಶಿಯಲ್ಲಿ ಹೊಗೆ ಬರುವುದನ್ನು ಕಂಡು ಸ್ಥಳೀಯರು ರಾಶಿಯ ಬಳಿ ತೆರಳಿ ನೋಡಿದಾಗ ಬೆಂಕಿ ಹತ್ತಿರುವುದು ತಿಳಿದಿದ್ದು ಕೂಡಲೇ ಹತ್ತಿರದಲ್ಲಿದ್ದ ನೀರನ್ನು ತಂದು ಹಾಕಿದರಾದರೂ ರಾಶಿಗೆ ಬೆಂಕಿ ಹೆಚ್ಚಿನ ಪ್ರಮಾಣದಲ್ಲಿ, ಆವರಿಸಿಕೊಂಡಿದ್ದರಿಂದ ಸುಮಾರು 200 ಕ್ವಿಂಟಲ್ನಷ್ಟು ಮೆಕ್ಕೆಜೋಳ ಸಂಪೂರ್ಣವಾಗಿ ಸುಟ್ಟು ಕರುಕಲಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 