ಕತ್ತೆಬೆನ್ನೂರು : ಮೆಕ್ಕೆಜೋಳ ರಾಶಿ ಬೆಂಕಿಗಾಹುತಿ
Kattebennur: Maize piles catch fire
ಲೋಕದರ್ಶನ ವರದಿ
ಹೂವಿನಹಡಗಲಿ 13: ವಿದ್ಯುತ್ ಕಿಡಿಯ ತಗುಲಿ ಮೆಕ್ಕೆಜೋಳ ರಾಶಿ ಸಂಪೂರ್ಣ ಬೆಂಕಿಯಿಂದ ಸುಟ್ಟು ಕರಕಲಾದ ಘಟನೆ ತಾಲ್ಲೂಕಿನ ಕತ್ತೆಬೆನ್ನೂರು ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.ಸುಮಾರು 9ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಬೆಳೆಯ ರಾಶಿಗೆ ಬೆಂಕಿಗಾಹುತಿಯಾಗಿದೆ. ನೀಲಗುಂದ ಗುರುವಣ್ಣ ಅವರಿಗೆ ಸೇರಿದ ಮೆಕ್ಕೆಜೋಳ ರಾಶಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸಮೀಪದ ಖಾಲಿ ಸ್ಥಳದಲ್ಲಿ ರಾಶಿ ಹಾಕಿದ್ದರು. ಗುರುವಾರ ಮಧ್ಯಾಹ್ನ ಮೆಕ್ಕೆಜೋಳ ರಾಶಿಯಲ್ಲಿ ಹೊಗೆ ಬರುವುದನ್ನು ಕಂಡು ಸ್ಥಳೀಯರು ರಾಶಿಯ ಬಳಿ ತೆರಳಿ ನೋಡಿದಾಗ ಬೆಂಕಿ ಹತ್ತಿರುವುದು ತಿಳಿದಿದ್ದು ಕೂಡಲೇ ಹತ್ತಿರದಲ್ಲಿದ್ದ ನೀರನ್ನು ತಂದು ಹಾಕಿದರಾದರೂ ರಾಶಿಗೆ ಬೆಂಕಿ ಹೆಚ್ಚಿನ ಪ್ರಮಾಣದಲ್ಲಿ, ಆವರಿಸಿಕೊಂಡಿದ್ದರಿಂದ ಸುಮಾರು 200 ಕ್ವಿಂಟಲ್ನಷ್ಟು ಮೆಕ್ಕೆಜೋಳ ಸಂಪೂರ್ಣವಾಗಿ ಸುಟ್ಟು ಕರುಕಲಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 