ಮಕ್ಕಳು ದುಶ್ಚಟಗಳಿಂದ ದೂರವಿದ್ದು, ಸುಂದರ ಪರಿಸರ ನಿರ್ಮಿಸಿ : ಶಿವರಾಜ್
Keep children away from bad habits and create a beautiful environment: Shivaraj
ಮಕ್ಕಳು ದುಶ್ಚಟಗಳಿಂದ ದೂರವಿದ್ದು, ಸುಂದರ ಪರಿಸರ ನಿರ್ಮಿಸಿ : ಶಿವರಾಜ್
ರಾಣೇಬೆನ್ನೂರು 07: ಮಕ್ಕಳು ದುಶ್ಚಟಗಳಿಂದ ದೋರವಿದ್ದು, ಸುಂದರ ಪರಿಸರ ನಿರ್ಮಿಸಿ ಆರೋಗ್ಯವಂತ ಬದುಕು ಕಟ್ಟಿಕೊಳ್ಳಬೇಕು ಇದರಿಂದ ಭವಿಷ್ಯದಲ್ಲಿ ಯಾವುದೇ ರೀತಿಯ ರೋಗ ರುಜಿನಗಳು ಬರುವುದಿಲ್ಲ ಎಂದು ಡಾ. ಶಿವರಾಜ್ ಎನ್. ಹೆಚ್. ಕರೆ ನೀಡಿದರು. ತಾಲೂಕಿನ ಹುಲಿಕಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ, ಮಕ್ಕಳು ಆರೋಗ್ಯ ಹೇಗೆ ಕಾಪಾಡಿಕೊಳ್ಳಬೇಕು ವಿಷಯ ಕುರಿತು ಮಾತನಾಡಿದರು.ಪ್ರಸ್ತುತ ಸಂದರ್ಭದಲ್ಲಿ ಅನೇಕ ರೋಗ ಯೋಜನೆಗಳಿಗೆ ಬಲಿಯಾಗುತ್ತಿರುವುದಕ್ಕೆ ನಮ್ಮ ಪರಿಸರದಲ್ಲಿ ಇರುವ ಅಸ್ವಚ್ಛತೆಯೇ ಕಾರಣವಾಗಿದೆ. ಡೆಂಗೊ, ಮತ್ತು ಮಲೇರಿಯಾ ರೋಗಗಳಿಂದ, ಸಾವು ಹೆಚ್ಚಳ ಕಂಡುಬರುತ್ತದೆ. ನೀರಿನ ಮೂಲಗಳನ್ನು ಸ್ವಚ್ಛವಾಗಿಟ್ಟುಕೊಂಡು ಮೇಲಿಂದ ಮೇಲೆ ಪಾತ್ರೆ ಪಗಡೆ, ಹಂಡೆ ಡ್ರಮ್ಮು ಮತ್ತಿತರ ನೀರು ಸಂಗ್ರಹಣೆಗಳ ಮೂಲದ ಸಾಮಗ್ರಿಗಳನ್ನು ಪರೀಶೀಲಿಸಿ ಶುದ್ಧಗೊಳಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಮತ್ತೋರ್ವ ಅತಿಥಿ ಡಾ. ಲೋಕೇಶ್ ವೈ. ಆರೋಗ್ಯ ಮತ್ತು ರಕ್ಷಣೆ ಅಂಗೈಯಲ್ಲಿ ಅರಮನೆ ವಿಷಯ ಕುರಿತು ಶಾಲಾ ಮಕ್ಕಳಿಗೆ ಸಾಧ್ಯಂತವಾಗಿ ವಿವರಿಸಿ ಮಾತನಾಡಿದರು. ಕಾರ್ಯಕ್ರಮಕ್ಕೆ ಮುನ್ನ ಗ್ರಾಮದಲ್ಲಿ ಆರೋಗ್ಯ ಜಾಗೃತಿ ಕುರಿತು, ಜನ ಜಾಗೃತಿ ಜಾತಾ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ನಾಗರಾಜ ಬಣಕಾರ್ ಅವರು ಅಧ್ಯಕ್ಷತೆ ವಹಿಸಿದ್ದರು. ಚಂದ್ರ್ಪ ಬಣಕಾರ್, ರೂಪಾ ಗೊಲ್ಲರ್, ಎಸ್ ಡಿ ಎಂ ಸಿ ಸದಸ್ಯರು, ಪದಾಧಿಕಾರಿಗಳು ಶಾಲಾ ಶಿಕ್ಷಕರು ಗ್ರಾಮದ ಗಣ್ಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 