ಕೇಜ್ರೀವಾಲ್ ಓರ್ವ ನಕ್ಸಲ್, ಉಗ್ರಗಾಮಿ: ಬಿಜೆಪಿ ಸಂಸದ
ನವದೆಹಲಿ, ಜ 29 : ದೆಹಲಿ ಚುನಾವಣಾ ಪ್ರಚಾರದ ವೇಳೆ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ವಿರುದ್ಧ ಕಿಡಿಕಾರಿರುವ ಬಿಜೆಪಿ ಸಂಸದ ಪರ್ವೇಶ್ ವರ್ಮಾ, ಅವರನ್ನು ಉಗ್ರಗಾಮಿ ಹಾಗೂ ನಕ್ಸಲ್ ಎಂದು ಕರೆದಿದ್ದಾರೆ.
ನಕ್ಸಲರು ಹಾಗೂ ಉಗ್ರಗಾಮಿಗಳು ಸರ್ಕಾರಿ ಆಸ್ತಿಯನ್ನು ಹಾಳುಗೆಡವಿದ ಮಾದರಿಯಲ್ಲೇ ಸಿಎಂ ಕೇಜ್ರೀವಾಲ್ ಕೆಲಸ ಮಾಡುತ್ತಿದ್ದಾರೆ ಎಂದು ಪರ್ವೇಶ್ ಹೇಳಿಕೆ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
ಇದರ ಜೊತೆಗೆ ಮಂಗಳವಾರ, ಶಹೀನ್ ಬಾಗ್ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರು 'ಅತ್ಯಾಚಾರಿಗಳು ಮತ್ತು ಕೊಲೆಗಡುಕರು' ಎಂಬ ಹೇಳಿಕೆ ನೀಡಿ ವರ್ಮಾ ವಿವಾದಕ್ಕೀಡಾಗಿದ್ದರು.
ಬುಧವಾರ ವರ್ಮಾ, 'ಕೇವಲ ಉಗ್ರಗಾಮಿಗಳು ಮತ್ತು ನಕ್ಸಲರು ಮಾತ್ರ ದೇಶಕ್ಕೆ ಹಾನಿ ಮಾಡಿ, ರಸ್ತೆಗಳು ಹಾಗೂ ಇತರ ಸರ್ಕಾರ ಆಸ್ತಿಗಳಿಗೆ ಹಾನಿಯುಂಟು ಮಾಡುತ್ತಾರೆ. ಅರವಿಂದ ಕೇಜ್ರೀವಾಲ್ ಕೂಡ ಅದನ್ನೇ ಮಾಡುತ್ತಿದ್ದಾರೆ' ಎಂದು ಹೇಳಿಕೆ ನೀಡಿದ್ದರು.
ಜೊತೆಗೆ, ತಮಗೆ ಅನಾಮಿಕ ಬೆದರಿಕೆ ಕರೆ ಬಂದಿರುವುದಾಗಿ ಹೇಳಿಕೆ ನೀಡಿರುವ ವರ್ಮಾ, ಈ ಕುರಿತು ಪೊಲೀಸರಿಗೆ ದೂರು ನೀಡುವುದಾಗಿ ಕೂಡ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 