ಕೇಜ್ರೀವಾಲ್ ಓರ್ವ ನಕ್ಸಲ್, ಉಗ್ರಗಾಮಿ: ಬಿಜೆಪಿ ಸಂಸದ
ನವದೆಹಲಿ, ಜ 29 : ದೆಹಲಿ ಚುನಾವಣಾ ಪ್ರಚಾರದ ವೇಳೆ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ವಿರುದ್ಧ ಕಿಡಿಕಾರಿರುವ ಬಿಜೆಪಿ ಸಂಸದ ಪರ್ವೇಶ್ ವರ್ಮಾ, ಅವರನ್ನು ಉಗ್ರಗಾಮಿ ಹಾಗೂ ನಕ್ಸಲ್ ಎಂದು ಕರೆದಿದ್ದಾರೆ.
ನಕ್ಸಲರು ಹಾಗೂ ಉಗ್ರಗಾಮಿಗಳು ಸರ್ಕಾರಿ ಆಸ್ತಿಯನ್ನು ಹಾಳುಗೆಡವಿದ ಮಾದರಿಯಲ್ಲೇ ಸಿಎಂ ಕೇಜ್ರೀವಾಲ್ ಕೆಲಸ ಮಾಡುತ್ತಿದ್ದಾರೆ ಎಂದು ಪರ್ವೇಶ್ ಹೇಳಿಕೆ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
ಇದರ ಜೊತೆಗೆ ಮಂಗಳವಾರ, ಶಹೀನ್ ಬಾಗ್ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರು 'ಅತ್ಯಾಚಾರಿಗಳು ಮತ್ತು ಕೊಲೆಗಡುಕರು' ಎಂಬ ಹೇಳಿಕೆ ನೀಡಿ ವರ್ಮಾ ವಿವಾದಕ್ಕೀಡಾಗಿದ್ದರು.
ಬುಧವಾರ ವರ್ಮಾ, 'ಕೇವಲ ಉಗ್ರಗಾಮಿಗಳು ಮತ್ತು ನಕ್ಸಲರು ಮಾತ್ರ ದೇಶಕ್ಕೆ ಹಾನಿ ಮಾಡಿ, ರಸ್ತೆಗಳು ಹಾಗೂ ಇತರ ಸರ್ಕಾರ ಆಸ್ತಿಗಳಿಗೆ ಹಾನಿಯುಂಟು ಮಾಡುತ್ತಾರೆ. ಅರವಿಂದ ಕೇಜ್ರೀವಾಲ್ ಕೂಡ ಅದನ್ನೇ ಮಾಡುತ್ತಿದ್ದಾರೆ' ಎಂದು ಹೇಳಿಕೆ ನೀಡಿದ್ದರು.
ಜೊತೆಗೆ, ತಮಗೆ ಅನಾಮಿಕ ಬೆದರಿಕೆ ಕರೆ ಬಂದಿರುವುದಾಗಿ ಹೇಳಿಕೆ ನೀಡಿರುವ ವರ್ಮಾ, ಈ ಕುರಿತು ಪೊಲೀಸರಿಗೆ ದೂರು ನೀಡುವುದಾಗಿ ಕೂಡ ತಿಳಿಸಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 