ಕೊರೋನಾ ಹೋರಾಟಕ್ಕೆ '5ಟಿ ಯೋಜನೆ' ಸಿದ್ಧಪಡಿಸಿದ ಕೇಜ್ರೀವಾಲ್
ನವದೆಹಲಿ, ಏ 7, ಮಾರಾಣಾಂತಿಕ ಕೊರೋನಾ ವೈರಸ್ ಸೋಂಕನ್ನು ಸದೆಬಡಿಯಲು ದೆಹಲಿ ಸರ್ಕಾರ '5ಟಿ ಯೋಜನೆ'ಯನ್ನು ಸಿದ್ಧಪಡಿಸಿದೆ. ಈ ಕುರಿತು ಡಿಜಿಟಲ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್, ಎಲ್ ಎನ್ ಜೆಪಿ ಆಸ್ಪತ್ರೆ, ಜಿಬಿ ಪಂತ್ ಆಸ್ಪತ್ರೆ ಮತ್ತು ರಾಜೀವ್ ಗಾಂಧಿ ಆಸ್ಪತ್ರೆಗಳನ್ನು ಕೋವಿಡ್-19 ಆರೋಗ್ಯ ಕೇಂದ್ರಗಳನ್ನಾಗಿ ಪರಿವರ್ತಿಸಲಾಗಿದೆ. 5 ಟಿ ಯೋಜನೆಯೆಂದರೆ, ಪರೀಕ್ಷೆ, ಪತ್ತೆ ಹಚ್ಚುವುದು, ಚಿಕಿತ್ಸೆ, ತಂಡದ ಕೆಲಸ ಮತ್ತು ನಿರ್ವಹಣೆ. (ಟೆಸ್ಟಿಂಗ್, ಟ್ರೇಸಿಂಗ್, ಟ್ರೀಟ್ಮೆಂಟ್, ಟೀಮ್ ವರ್ಕ್ ಮತ್ತು ಟ್ರ್ಯಾಕಿಂಗ್ ಆ್ಯಂಡ್ ಮಾನಿಟರಿಂಗ್ ) ದೆಹಲಿ ಕೊರೋನಾ ಸೋಂಕಿನ ವಿರುದ್ಧ ಹೋರಾಡಲು ಸಿದ್ಧವಾಗಿದೆ ಎಂದರು. ಕೊರೋನಾ ಸೋಂಕಿನ ವಿರುದ್ಧ ಹೋರಾಡುವ ನಿಟ್ಟಿನಲ್ಲಿ ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಈ ಯೋಜನೆ ರೂಪಿಸಲಾಗಿದೆ ಎಂದರು. ಸದ್ಯ ದೆಹಲಿಯಲ್ಲಿ 2950 ಆಸ್ಪತ್ರೆಯ ಬೆಡ್ ಗಳು ಕೊರೋನಾ ರೋಗಿಗಳಿಗೆ ಮೀಸಲಾಗಿವೆ. ಉಳಿದಂತೆ ಮೂರು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಈ ಪಟ್ಟಿಗೆ ಸೇರಿಸಲಾಗಿದೆ ಎಂದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 