ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೇರಳ-ಕರ್ನಾಟಕ ಗಡಿ ಬಂದ್ ವಿವಾದ
ಮಂಗಳೂರು, ಎ.3,ಕೇರಳ-ಕರ್ನಾಟಕ ಗಡಿ ಬಂದ್ ವಿಷಯ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯನ್ನು ತೆರೆಯುವಂತೆ ಕೇರಳ ಹೈಕೋರ್ಟ್ ಎಪ್ರಿಲ್ 1ರಂದು ನೀಡಿರುವ ಆದೇಶದ ಸಿಂಧುತ್ವವನ್ನು ಪ್ರಶ್ನಿಸಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.ಈಗಾಗಲೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕೂಡ ಗಡಿ ಬಂದ್ ಮಾಡಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದರು.ಮಿಥುನ್ ತಮ್ಮ ವಕೀಲರಾದ ಸಂಜಯ್ ಎಂ ನುಳಿ ಎಂಬವರ ಮೂಲಕ ಮೇಲ್ಮನವಿ ಸಲ್ಲಿಸಿದ್ದಾರೆ. ನ್ಯಾ. ಎಲ್.ನಾಗೇಶ್ವರ ರಾವ್ ಹಾಗೂ ಜಸ್ಟಿಸ್ ದೀಪಕ್ ಗುಪ್ತಾ ಅವರ ಪೀಠ ಈ ಪ್ರಕರಣವನ್ನು ಕರ್ನಾಟಕ ಸರಕಾರ ಸಲ್ಲಿಸಿರುವ ಮತ್ತೊಂದು ಅರ್ಜಿಯ ಜತೆಗೆ ವಿಚಾರಣೆ ನಡೆಸಲಿದೆ.
ನೆರೆಯ ಕಾಸರಗೋಡು ಜಿಲ್ಲೆಯಿಂದ ಮಂಗಳೂರಿಗೆ ದೊಡ್ಡ ಸಂಖ್ಯೆಯಲ್ಲಿ ರೋಗಿಗಳು ಆಗಮಿಸುವುದರಿಂದ ಸದ್ಯದ ಕೊರೋನ ವೈರಸ್ ಸೋಂಕು ಸಮಸ್ಯೆಯನ್ನು ನಿಭಾಯಿಸುವ ಸಮಯದಲ್ಲಿ ಇದು ಇಲ್ಲಿನ ಆರೋಗ್ಯ ಸೇವಾ ಸಂಸ್ಥೆಗಳ ಮೇಲೆ ಹೆಚ್ಚಿನ ಒತ್ತಡ ಸೃಷ್ಟಿಸುತ್ತದೆ. ಆದ್ದರಿಂದ ಗಡಿ ಬಂದ್ ಮಾಡಿರುವುದು ಸರಿಯಾದ ಕ್ರಮ ಎಂದು ಅವರು ಅರ್ಜಿಯಲ್ಲಿ ವಾಸಿದಿದ್ದಾರೆ. 'ಜಿಲ್ಲೆಯ ಜನರ ಹಿತಾಸಕ್ತಿಯನ್ನು ಗಮನದಲ್ಲಿರಿಸಿ ಹಾಗೂ ಅವರ ಆರೋಗ್ಯವನ್ನು ರಕ್ಷಿಸುವ ಉದ್ದೇಶದಿಂದ ಮಾತ್ರ ಕೇರಳದಿಂದ ದಕ್ಷಿಣ ಕನ್ನಡಕ್ಕೆ ಜನರು ಆಗಮಿಸುವುದರ ಮೇಲೆ ನಿರ್ಬಂಧ ಹೇರಲಾಗಿದೆ, ಕರ್ನಾಟಕ ಸರಕಾರ ಇಲ್ಲಿನ ಆಸ್ಪತ್ರೆಗಳ ಮೇಲೆ ಒತ್ತಡ ಹೆಚ್ಚಾಗದಂತೆ ಮಾಡುವ ಉದ್ದೇಶದಿಂದ ಸಾಂಕ್ರಾಮಿಕ ರೋಗಗಳ ಕಾಯಿದೆ 1897 ಇದರನ್ವಯ ಈ ನಿರ್ಬಂಧ ಹೇರಿದೆ' ಎಂದು ಮಿಥುನ್ ರೈ ಸಲ್ಲಿಸಿರುವ ಅರ್ಜಿಯಲ್ಲಿ ತಿಳಿಸಿದ್ದಾರೆ
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 