ಖಗರ್ೆ-ಗೋಯಲ್ ಮಾತಿನ ಚಕಮಕಿ
ನವದೆಹಲಿ: ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾಜರ್ುನ್ ಖಗರ್ೆ ಹಾಗೂ ಕೇಂದ್ರ ಹಣಕಾಸು ಸಚಿವ ಪಿಯೂಷ್ ಗೋಯಲ್ ನಡುವೆ ಲೋಕಸಭೆಯಲ್ಲಿ ಗುರುವಾರ ತೀವ್ರ ಮಾತಿನ ಚಕಮಕಿ ನಡೆದಿದ್ದು, ತಾಕತ್ತಿದ್ದರೆ ಮುಂಬೈನಲ್ಲಿ ನನ್ನ ವಿರುದ್ಧ ಸ್ಪಧರ್ಿಸಿ ಎಂದು ಗೋಯಲ್ ಅವರು ಖಗರ್ೆ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ.
ಇಂದು ಲೋಕಸಭೆಯಲ್ಲಿ ಜಿಎಸ್ ಟಿ ಕಾನೂನು ತಿದ್ದುಪಡಿ ಕುರಿತ ಚಚರ್ೆಯಲ್ಲಿ ಭಾಗವಹಿಸಿ ಮಾತನಾಡಿದ ಗೋಯಲ್, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸಂಸದರ ಸಂಖ್ಯೆ ನಾಲ್ಕಕ್ಕೆ ಇಳಿಯಲಿದೆ ಎಂದರು.
ಇದರಿಂದ ಆಕ್ರೋಶಗೊಂಡ ಕಾಂಗ್ರೆಸ್ ನಾಯಕ ಮಲ್ಲಿಕಾಜರ್ುನ್ ಖಗರ್ೆ, 'ಈ ವರೆಗೆ ಯಾವುದೇ ಸ್ಥಳೀಯ ಚುನಾವಣೆಯನ್ನೂ ಗೆಲ್ಲದಿರುವ ಗೋಯಲ್ ಅವರನ್ನು ರಾಜ್ಯಸಭೆಗೆ ತಂದು ಹಣಕಾಸು ಸಚಿವರನ್ನಾಗಿ ಮಾಡಲಾಗಿದೆ' ಎಂದು ಲೇವಡಿ ಮಾಡಿದರು.
ತಾಕತ್ತಿದ್ದರೆ ಮುಂಬೈನಲ್ಲಿ ನನ್ನ ವಿರುದ್ಧ ಸ್ಪಧರ್ಿಸಿ ಎಂದು ಗೋಯಲ್ ಅವರು ಖಗರ್ೆಗೆ ಸವಾಲಿನ ತಿರುಗೇಟು ನೀಡಿದರು.
ಇದೇ ವೇಳೆ ರಾಫೆಲ್ ಒಪ್ಪಂದದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ ಮಲ್ಲಿಕಾಜರ್ುನ್ ಖಗರ್ೆ ಹಾಗೂ ಇತರೆ ಕಾಂಗ್ರೆಸ್ ನಾಯಕರು, ರಾಫೆಲ್ ಡೀಲ್ ಅನ್ನು ಜಂಟಿ ಸದನ ಸಮಿತಿ(ಜೆಪಿಸಿ) ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 