ಖಾಸ್ಗತೇಶ್ವರ ಜಾತ್ರೆ: ಗೋಪಾಲ ಕಾವಲಿ ಕಾರ್ಯಕ್ರಮಕ್ಕೆ ಸಿದ್ದಲಿಂಗಶ್ರೀ ಚಾಲನೆ

ಖಾಸ್ಗತೇಶ್ವರ ಜಾತ್ರೆ: ಗೋಪಾಲ ಕಾವಲಿ ಕಾರ್ಯಕ್ರಮಕ್ಕೆ ಸಿದ್ದಲಿಂಗಶ್ರೀ ಚಾಲನೆ  Khasgateshwar Jatre: Siddalingashree drive for Gopal Kavali programme

ತಾಳಿಕೋಟಿ 08: ಪಟ್ಟಣದ ಐತಿಹಾಸಿಕ ಖಾಸ್ಗತೇಶ್ವರ ಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಪಾರಂಪರಿಕ ಗೋಪಾಲ ಕಾವಲಿ (ಮೊಸರು ಗಡಿಗೆ ಒಡೆಯುವ) ಕಾರ್ಯಕ್ರಮಕ್ಕೆ ಸಿದ್ದಲಿಂಗ ದೇವರು ಚಾಲನೆ ನೀಡಿದರು.  

ಸೋಮವಾರ ಮುಂಜಾನೆ 5ಘಂಟೆಗೆ ಶ್ರೀಮಠದಲ್ಲಿ ನಡೆಯುವ ಈ ಜನಪದೀಯ ಸಂಸ್ಕೃತಿಯ ವಿಶಿಷ್ಟ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಖಾಸ್ಗತರು ಆ ಕಾಲದಲ್ಲಿ ಈ ಭಾಗದ ಭಕ್ತರು ಪಾದಯಾತ್ರೆ ಮೂಲಕ ಪಂಡರಪುರಕ್ಕೆ ಪಾಂಡುರಂಗ ವಿಠಲನ ದರ್ಶನಕ್ಕೆ ಹೋಗುವುದನ್ನು ನೋಡಿ ತಾವೇ ಸ್ವತಹ ಪಂಡರಪುರಕ್ಕೆ ಪ್ರಯಾಣ ಮಾಡಿ ಅಲ್ಲಿರುವ ಮೊಸರು ಗಡಿಗೆ ಒಡೆಯುವ ಕಾರ್ಯಕ್ರಮ ಇಲ್ಲಿಯೇ ನಡೆಸಿ ಭಕ್ತರಿಗೆ ಅನುಕೂಲ ಮಾಡಿಕೊಡಲೆಂದು ಅಲ್ಲಿಂದ ಮೊಸರು ಗಡಿಗೆಯನ್ನು ತಂದು ಈ ವಿಶಿಷ್ಟ ಕಾರ್ಯಕ್ರಮವನ್ನು ಆರಂಭಿಸಿದರು. ಅಂದಿನಿಂದ ಇಂದಿನವರೆಗೆ ಈ ಸಂಪ್ರದಾಯ ಶ್ರೀಮಠದಲ್ಲಿ ನಡೆಯುತ್ತಾ ಬಂದಿದೆ ಎಂದರು.  

ಮಠದ ಆಡಳಿತ ಮುಖ್ಯಸ್ಥ ಮುರುಗೇಶ ವಿರಕ್ತಮಠ ಹಾಗೂ ಅಪಾರ ಸಂಖ್ಯೆಯಲ್ಲಿ ಭಕ್ತರು ಉಪಸ್ಥಿತರಿದ್ದರು.