ಖಾಸ್ಗತೇಶ್ವರ ಜಾತ್ರೆ: ಗೋಪಾಲ ಕಾವಲಿ ಕಾರ್ಯಕ್ರಮಕ್ಕೆ ಸಿದ್ದಲಿಂಗಶ್ರೀ ಚಾಲನೆ
Khasgateshwar Jatre: Siddalingashree drive for Gopal Kavali programme
ತಾಳಿಕೋಟಿ 08: ಪಟ್ಟಣದ ಐತಿಹಾಸಿಕ ಖಾಸ್ಗತೇಶ್ವರ ಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಪಾರಂಪರಿಕ ಗೋಪಾಲ ಕಾವಲಿ (ಮೊಸರು ಗಡಿಗೆ ಒಡೆಯುವ) ಕಾರ್ಯಕ್ರಮಕ್ಕೆ ಸಿದ್ದಲಿಂಗ ದೇವರು ಚಾಲನೆ ನೀಡಿದರು.
ಸೋಮವಾರ ಮುಂಜಾನೆ 5ಘಂಟೆಗೆ ಶ್ರೀಮಠದಲ್ಲಿ ನಡೆಯುವ ಈ ಜನಪದೀಯ ಸಂಸ್ಕೃತಿಯ ವಿಶಿಷ್ಟ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಖಾಸ್ಗತರು ಆ ಕಾಲದಲ್ಲಿ ಈ ಭಾಗದ ಭಕ್ತರು ಪಾದಯಾತ್ರೆ ಮೂಲಕ ಪಂಡರಪುರಕ್ಕೆ ಪಾಂಡುರಂಗ ವಿಠಲನ ದರ್ಶನಕ್ಕೆ ಹೋಗುವುದನ್ನು ನೋಡಿ ತಾವೇ ಸ್ವತಹ ಪಂಡರಪುರಕ್ಕೆ ಪ್ರಯಾಣ ಮಾಡಿ ಅಲ್ಲಿರುವ ಮೊಸರು ಗಡಿಗೆ ಒಡೆಯುವ ಕಾರ್ಯಕ್ರಮ ಇಲ್ಲಿಯೇ ನಡೆಸಿ ಭಕ್ತರಿಗೆ ಅನುಕೂಲ ಮಾಡಿಕೊಡಲೆಂದು ಅಲ್ಲಿಂದ ಮೊಸರು ಗಡಿಗೆಯನ್ನು ತಂದು ಈ ವಿಶಿಷ್ಟ ಕಾರ್ಯಕ್ರಮವನ್ನು ಆರಂಭಿಸಿದರು. ಅಂದಿನಿಂದ ಇಂದಿನವರೆಗೆ ಈ ಸಂಪ್ರದಾಯ ಶ್ರೀಮಠದಲ್ಲಿ ನಡೆಯುತ್ತಾ ಬಂದಿದೆ ಎಂದರು.
ಮಠದ ಆಡಳಿತ ಮುಖ್ಯಸ್ಥ ಮುರುಗೇಶ ವಿರಕ್ತಮಠ ಹಾಗೂ ಅಪಾರ ಸಂಖ್ಯೆಯಲ್ಲಿ ಭಕ್ತರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 