ಖಾಸ್ಗತೇಶ್ವರ ಜಾತ್ರೆ: ಗೋಪಾಲ ಕಾವಲಿ ಕಾರ್ಯಕ್ರಮಕ್ಕೆ ಸಿದ್ದಲಿಂಗಶ್ರೀ ಚಾಲನೆ
Khasgateshwar Jatre: Siddalingashree drive for Gopal Kavali programme
ತಾಳಿಕೋಟಿ 08: ಪಟ್ಟಣದ ಐತಿಹಾಸಿಕ ಖಾಸ್ಗತೇಶ್ವರ ಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಪಾರಂಪರಿಕ ಗೋಪಾಲ ಕಾವಲಿ (ಮೊಸರು ಗಡಿಗೆ ಒಡೆಯುವ) ಕಾರ್ಯಕ್ರಮಕ್ಕೆ ಸಿದ್ದಲಿಂಗ ದೇವರು ಚಾಲನೆ ನೀಡಿದರು.
ಸೋಮವಾರ ಮುಂಜಾನೆ 5ಘಂಟೆಗೆ ಶ್ರೀಮಠದಲ್ಲಿ ನಡೆಯುವ ಈ ಜನಪದೀಯ ಸಂಸ್ಕೃತಿಯ ವಿಶಿಷ್ಟ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಖಾಸ್ಗತರು ಆ ಕಾಲದಲ್ಲಿ ಈ ಭಾಗದ ಭಕ್ತರು ಪಾದಯಾತ್ರೆ ಮೂಲಕ ಪಂಡರಪುರಕ್ಕೆ ಪಾಂಡುರಂಗ ವಿಠಲನ ದರ್ಶನಕ್ಕೆ ಹೋಗುವುದನ್ನು ನೋಡಿ ತಾವೇ ಸ್ವತಹ ಪಂಡರಪುರಕ್ಕೆ ಪ್ರಯಾಣ ಮಾಡಿ ಅಲ್ಲಿರುವ ಮೊಸರು ಗಡಿಗೆ ಒಡೆಯುವ ಕಾರ್ಯಕ್ರಮ ಇಲ್ಲಿಯೇ ನಡೆಸಿ ಭಕ್ತರಿಗೆ ಅನುಕೂಲ ಮಾಡಿಕೊಡಲೆಂದು ಅಲ್ಲಿಂದ ಮೊಸರು ಗಡಿಗೆಯನ್ನು ತಂದು ಈ ವಿಶಿಷ್ಟ ಕಾರ್ಯಕ್ರಮವನ್ನು ಆರಂಭಿಸಿದರು. ಅಂದಿನಿಂದ ಇಂದಿನವರೆಗೆ ಈ ಸಂಪ್ರದಾಯ ಶ್ರೀಮಠದಲ್ಲಿ ನಡೆಯುತ್ತಾ ಬಂದಿದೆ ಎಂದರು.
ಮಠದ ಆಡಳಿತ ಮುಖ್ಯಸ್ಥ ಮುರುಗೇಶ ವಿರಕ್ತಮಠ ಹಾಗೂ ಅಪಾರ ಸಂಖ್ಯೆಯಲ್ಲಿ ಭಕ್ತರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 