ಸರಕಾರ ರಚನೆಗೆ ಮತ್ತೆ ಖಟ್ಟರ್ ಹಕ್ಕುಮಂಡನೆ
ಚಂಡಿಗಡ, ಅ. 26: ಸತತ ಎರಡನೇ ಅವಧಿಗೆ ಹರಿಯಾಣದ ಮುಖ್ಯಮಂತ್ರಿಯಾಗಲು ಸಜ್ಜಾಗಿರುವ ಮನೋಹರ್ ಲಾಲ್ ಖಟ್ಟರ್ ಅವರು ಇಂದು ರಾಜ್ಯಪಾಲ ಸತ್ಯದೇವ್ ನಾರಾಯಣ್ ಆರ್ಯ ಅವರನ್ನು ಭೇಟಿ ಮಾಡಿ ಸರ್ಕಾರ ರಚಿಸುವ ಹಕ್ಕು ಮಂಡಿಸಲಿದ್ದಾರೆ. ಗುರುವಾರ ನಡೆದ ಚುನಾವಣಾ ಫಲಿತಾಂಶಗಳು ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಈಗ ಬಿಜೆಪಿ ಪಕ್ಷೆತರರ ಬೆಂಬಲದ ಮೂಲಕ ಸರಕಾರ ರಚನೆಗೆ ಮುಂದಾಗಿದೆ. ಹರಿಯಾಣದ 90 ಸ್ಥಾನಗಳಲ್ಲಿ 10 ಸ್ಥಾನಗಳನ್ನು ಗೆದ್ದ ಮತ್ತು ರಾಜ್ಯ ರಾಜಕಾರಣದಲ್ಲಿ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆಯಲ್ಲಿದ್ದ ಜನ್ನಾಯಕ್ ಜನತಾ ಪಕ್ಷ (ಜೆಜೆಪಿ) ಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ ಹೇಳುತ್ತಿದೆ. ಬಿಜೆಪಿ 40 ಸ್ಥಾನಗಳನ್ನು ಗೆದ್ದಿದ್ದು ಸರಳ ಬಹುಮತಕ್ಕಿಂತ ಆರು ಸ್ಥಾನಗಳು ಕಡಿಮೆಯಾಗಿದೆ. ರಾಜ್ಯದ ಪ್ರಬಲ ಸಮುದಾಯವಾದ ಜಾಟ್ ರನ್ನು ಸಮಾಧಾನಪಡಿಸುಲು ಬಿಜೆಪಿ ಮುಂದಾಗಿದೆ ಎಂದೂ ಹೇಳಲಾಗಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 