ಸರಕಾರ ರಚನೆಗೆ ಮತ್ತೆ ಖಟ್ಟರ್ ಹಕ್ಕುಮಂಡನೆ
ಚಂಡಿಗಡ, ಅ. 26: ಸತತ ಎರಡನೇ ಅವಧಿಗೆ ಹರಿಯಾಣದ ಮುಖ್ಯಮಂತ್ರಿಯಾಗಲು ಸಜ್ಜಾಗಿರುವ ಮನೋಹರ್ ಲಾಲ್ ಖಟ್ಟರ್ ಅವರು ಇಂದು ರಾಜ್ಯಪಾಲ ಸತ್ಯದೇವ್ ನಾರಾಯಣ್ ಆರ್ಯ ಅವರನ್ನು ಭೇಟಿ ಮಾಡಿ ಸರ್ಕಾರ ರಚಿಸುವ ಹಕ್ಕು ಮಂಡಿಸಲಿದ್ದಾರೆ. ಗುರುವಾರ ನಡೆದ ಚುನಾವಣಾ ಫಲಿತಾಂಶಗಳು ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಈಗ ಬಿಜೆಪಿ ಪಕ್ಷೆತರರ ಬೆಂಬಲದ ಮೂಲಕ ಸರಕಾರ ರಚನೆಗೆ ಮುಂದಾಗಿದೆ. ಹರಿಯಾಣದ 90 ಸ್ಥಾನಗಳಲ್ಲಿ 10 ಸ್ಥಾನಗಳನ್ನು ಗೆದ್ದ ಮತ್ತು ರಾಜ್ಯ ರಾಜಕಾರಣದಲ್ಲಿ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆಯಲ್ಲಿದ್ದ ಜನ್ನಾಯಕ್ ಜನತಾ ಪಕ್ಷ (ಜೆಜೆಪಿ) ಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ ಹೇಳುತ್ತಿದೆ. ಬಿಜೆಪಿ 40 ಸ್ಥಾನಗಳನ್ನು ಗೆದ್ದಿದ್ದು ಸರಳ ಬಹುಮತಕ್ಕಿಂತ ಆರು ಸ್ಥಾನಗಳು ಕಡಿಮೆಯಾಗಿದೆ. ರಾಜ್ಯದ ಪ್ರಬಲ ಸಮುದಾಯವಾದ ಜಾಟ್ ರನ್ನು ಸಮಾಧಾನಪಡಿಸುಲು ಬಿಜೆಪಿ ಮುಂದಾಗಿದೆ ಎಂದೂ ಹೇಳಲಾಗಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 