ಖೇಲೋ ಇಂಡಿಯಾ: ಬಾಲಕಿಗೆ ಚುಚ್ಚಿದ ಬಾಣ, ಪ್ರಾಣಾಪಾಯದಿಂದ ಪಾರು
ನವದೆಹಲಿ, ಜ ೧೦ ಬಿಲ್ಲುಗಾರಿಕೆ ಅಭ್ಯಾಸ ನಡೆಸುತ್ತಿರುವ ವೇಳೆ ಬಾಲಕಿಯ ಭುಜಕ್ಕೆ ಬಾಣ ಚುಚ್ಚಿರುವ ಆಘಾತಕಾರಿ ಘಟನೆ ಅಸ್ಸಾಂನಲ್ಲಿ ನಡೆದಿದ್ದು, ಅದೃಷ್ಟವಶಾತ್ ಯುವ ಆರ್ಚರಿ ಪಟು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಗುವಾಹಟಿಯ ದಿಬ್ರುಗರ್ ಜಿಲ್ಲೆಯ ಚಬುವಾದಲ್ಲಿ ಆರ್ಚರಿ ಅಭ್ಯಾಸ ನಡೆಸುತ್ತಿದ್ದ ವೇಳೆ 12ರ ಹರೆಯದ ಬಾಲಕಿ ಶಿವಾಂಗಿನಿ ಗೋಹೈನ್ ಭುಜಕ್ಕೆ ತೀಕ್ಷ್ಣವಾದ ಬಾಣ ಚುಚ್ಚಿಕೊಂಡಿದೆ. ಆರಂಭದಲ್ಲಿ ಖೇಲೋ ಇಂಡಿಯಾ ಗೇಮ್ಸ್ನಲ್ಲಿ ಅನಾಹುತ ಸಂಭವಿಸಿದೆ ಎಂಬ ವರದಿಗಳು ಬಂದಿತ್ತು. ಬಳಿಕ ಅಸ್ಸಾಂ ಆರ್ಚರಿ ಅಸೋಸಿಯೇಷನ್ ಘಟನೆ ಬಗ್ಗೆ ಸ್ಪಷ್ಟನೆ ನೀಡಿದೆ.ಶಿವಾಂಗಿನಿ ಖೇಲೋ ಇಂಡಿಯಾ ಟೂರ್ನಿಯಲ್ಲಿ ಭಾಗವಹಿಸಲು ಅಭ್ಯಾಸ ನಡೆಸುತ್ತಿದ್ದರು ಎನ್ನಲಾಗಿದೆ. ಭಾರತೀಯ ಕ್ರೀಡಾ ಪ್ರಾಧಿಕಾರದ (ಸಾಯ್) ಕೇಂದ್ರದಲ್ಲಿ ಘಟನೆ ನಡೆದಿದ್ದು, ತಕ್ಷಣ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಬಾಲಕಿ ಈಗ ಚೇತರಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಬಾಲಕಿಯ ಬೇಕಾಗಿರುವ ಚಿಕಿತ್ಸೆಯ ಎಲ್ಲ ವೆಚ್ಚವನ್ನು ಭರಿಸುವುದಾಗಿ ಭಾರತೀಯ ಕ್ರೀಡಾ ಪ್ರಾಧಿಕಾರ ಘೋಷಿಸಿದೆ. ಖೆಲೋ ಇಂಡಿಯಾ ಯೂತ್ ಗೇಮ್ಸ್, ಅಸ್ಸಾಂನ ಗುವಾಹಟಿಯಲ್ಲಿ ಜನವರಿ 10 ರಿಂದ 22ರ ವರೆಗೆ ನಡೆಯುತ್ತಿದೆ.ಒಂಬತ್ತರ ಹರೆಯದಿಂದಲೇ ಬಿಲ್ಲುಗಾರಿಕೆಯಲ್ಲಿ ಪ್ರವೀಣೆಯಾಗಿರುವ ಶಿವಾಂಗಿನಿ ಈಗಾಗಲೇ ಅನೇಕ ಪದಕಗಳನ್ನು ಗೆದಿದ್ದಾರೆ. ಆಂಧ್ರ ಪ್ರದೇಶದಲ್ಲಿ ನಡೆದ 65ನೇ ರಾಷ್ಟ್ರೀಯ ಶಾಲಾ ಕ್ರೀಡಾ ಆರ್ಚರಿ ಚಾಂಪಿಯನ್ಶಿಪ್ನಲ್ಲೂ ಭಾಗವಹಿಸಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 