ಗದಗ 13: ಪರಮಪೂಜ್ಯ ಲಿಂ. ಪಂ. ಪಂಚಾಕ್ಷರಿ ಗವಾಯಿಗಳವರ 81ನೇ ಹಾಗೂ ಪದ್ಮಭೂಷಣ ಲಿಂ.ಡಾ. ಪಂ. ಪುಟ್ಟರಾಜ ಕವಿ ಗವಾಯಿಗಳವರ 15ನೇ ಪುಣ್ಯಸ್ಮರಣೋತ್ಸವ ಹಾಗೂ ಉಭಯ ಗುರುಗಳ ಜಾತ್ರಾ ಮಹೋತ್ಸವದ ಅಂಗವಾಗಿ ಇದೇ ಜೂ. 14 ರಂದು ಶನಿವಾರ ಸಂಜೆ 6 ಗಂಟೆಗೆ ವಿರೇಶ್ವರ ಪುಣ್ಯಾಶ್ರಮದಲ್ಲಿ ಕೀರ್ತನ ಸಮ್ಮೇಳನ ಜರುಗುವುದು.
ಈ ಕಾರ್ಯಕ್ರಮದಲ್ಲಿ ಮುಂಡರಗಿ ಸಂಸ್ಥಾನಮಠದ ಪೂಜ್ಯಶ್ರೀ ನಾಡೋಜ ಡಾ. ಅನ್ನದಾನೀಶ್ವರ ಶಿವಯೋಗಿಗಳವರು ಸಾನಿಧ್ಯ ವಹಿಸುವರು. ಹೊಸಳ್ಳಿ ಬೂದೀಶ್ವರ ಸಂಸ್ಥಾನ ಮಠದ ಪೂಜ್ಯಶ್ರೀ ಜ. ಅಭಿನವ ಬೂದೀಶ್ವರ ಮಹಾಸ್ವಾಮಿಗಳು ಅಧ್ಯಕ್ಷತೆ ವಹಿಸುವರು. ಕನಕಗಿರಿ ಸುವರ್ಣಗಿರಿ ಸಂಸ್ಥಾನ ವಿರಕ್ತಮಠದ ಪೂಜ್ಯಶ್ರೀ ಡಾ. ಚನ್ನಮಲ್ಲ ಮಹಾಸ್ವಾಮಿಗಳು, ಕಪೋತಗಿರಿ ನಂದಿವೇರಿ ಸಂಸ್ಥಾನ ಮಠದ ಪೂಜ್ಯಶ್ರೀ ಶಿವಕುಮಾರ ಮಹಾಸ್ವಾಮಿಗಳು ನೇತೃತ್ವ ವಹಿಸುವರು.
ಯಲಬುರ್ಗಾದ ಬಸವಲಿಂಗೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಗುಳೇದಗುಡ್ಡದ ಅಭಿನವ ಒಪ್ಪತ್ತೇಶ್ವರ ಮಹಾಸ್ವಾಮಿಗಳು, ಹೂವಿನಹಡಗಲಿಯ ಡಾ. ಹಿರಿಯ ಶಾಂತವೀರ ಮಹಾಸ್ವಾಮಿಗಳು, ಸೋಲಾಪುರದ ಪೂಜ್ಯಶ್ರೀ ಡಾ.ಅಭಿನವ ಬಸವಲಿಂಗ ಮಹಾಸ್ವಾಮಿಗಳು, ಕಲಬುರ್ಗಿಯ ಪೂಜ್ಯಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯರು, ಅಣ್ಣಿಗೇರಿಯ ಶಿವಕುಮಾರ ಮಹಾಸ್ವಾಮಿಗಳು, ಮಲ್ಲಸಮುದ್ರದ ಓಂಕಾರೇಶ್ವರ ಹಿರೇಮಠದ ಫಕೀರೇಶ್ವರ ಪಟ್ಟಾಧ್ಯಕ್ಷರು, ಅಸುಂಡಿ ಅಧ್ಯಾತ್ಮ ವಿದ್ಯಾಶ್ರಮದ ಪೂಜ್ಯಶ್ರೀ ಶಿವಶರಣೆ ನೀಲಮ್ಮತಾಯಿಯವರು, ಲಿಂಗಸೂರಿನ ಪೂಜ್ಯಶ್ರೀ ಶಿವಶರಣೆ ನಂದೀಶ್ವರಿ ಅಮ್ಮನವರು, ಹುಬ್ಬಳ್ಳಿಯ ಸಮಾಜ ಸೇವಕಿ ಮಹೇಶ್ವರಿ ಪಾಟೀಲ ಅವರು ಸಮ್ಮುಖ ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್ ಕೆ ಪಾಟೀಲ, ರೋಣ ಶಾಸಕರಾದ ಜಿ.ಎಸ್. ಪಾಟೀಲ, ಮಾಜಿ ಶಾಸಕರಾದ ಡಿ. ಆರ್. ಪಾಟೀಲ, ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ, ಜಿಲ್ಲಾ ಪಂಚಾಯತ್ ಸಿಇಓ ಭರತ್ ಎಸ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ಎಸ್. ನೇಮಗೌಡ, ತಾತನಗೌಡ ಪಾಟೀಲ, ಪೀರಸಾಬ ಕೌತಾಳ, ಪ್ರಕಾಶ ಬಸರಿಗಿಡದ, ಮಹಾಂತೇಶ ಕೆ., ಸಿದ್ದನಗೌಡ ಪಾಟೀಲ, ಮುರುಗೇಶ ಬಡ್ನಿ, ಶೇಖಣ್ಣ ಗದ್ದಕೇರಿ, ವಿ. ಆರ್. ಗೋವಿಂದಗೌಡ್ರ, ರೇಣುಕಾಪ್ರಸಾದ ಸಿಗ್ಲಿಮಠ, ಚನ್ನಬಸಯ್ಯ ಬಂಕಾಪುರಮಠ, ಎಸ್. ಗುರುಪಂಚಾಕ್ಷರಿ ಸೇರಿದಂತೆ ಮುಂತಾದವರು ಭಾಗವಹಿಸುವರು.
ಇದೇ ಸಂದರ್ಭದಲ್ಲಿ ಮುಂಡರಗಿಯ ಜಗದ್ಗುರು ಮಹಾಸನ್ನಿಧಿಯವರಿಂದ ದಾನಶೂರ ಬಸರಿಗಿಡದ ವೀರ್ಪನವರ ದಂಪತಿಗಳ ಶಿಲಾಮಂಟಪ ಉದ್ಘಾಟನೆ ಜರುಗಲಿದೆ ನಂತರ ಪೂಜ್ಯಶ್ರೀ ಡಾ.ಕಲ್ಲಯ್ಯಜ್ಜನವರ ತುಲಾಭಾರ ಸೇವೆ ಜರುಗಲಿದೆಇದಕ್ಕೂ ಮುನ್ನ ಬೆಳಗ್ಗೆ 10 ಗಂಟೆಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಪೂಜ್ಯಶ್ರೀ ಡಾ. ಕಲ್ಲಯ್ಯಜ್ಜನವರು ಉದ್ಘಾಟಿಸಲಿದ್ದಾರೆಬೆಳಿಗ್ಗೆ 11 ಗಂಟೆಗೆ ಸನ್ಮಾನ ಕಾರ್ಯಕ್ರಮ ಜರುಗಲಿದೆ. ಕಪೋತಗಿರಿ ನಂದಿವೇರಿ ಪೂಜ್ಯಶ್ರೀ ಶಿವಕುಮಾರ ಮಹಾಸ್ವಾಮಿಗಳು ಸಾನಿಧ್ಯ ವಹಿಸುವರು. ಅಡ್ನೂರ-ರಾಜೂರು ಬೃಹನ್ಮಠದ ಅಭಿನವ ಪಂಚಾಕ್ಷರ ಶಿವಾಚಾರ್ಯ ಮಹಾಸ್ವಾಮಿಗಳು ಅಧ್ಯಕ್ಷತೆ ವಹಿಸುವವರು. ಪೂಜ್ಯಶ್ರೀ ಡಾ. ಕಲ್ಲಯ್ಯಜ್ಜನವರು ಸಮ್ಮುಖ ವಹಿಸುವರು. ಇದೇ ಸಂದರ್ಭದಲ್ಲಿ ರೋಣದ ಶಿವಣ್ಣನವರು ಪಲ್ಲೇದ, ವಿಶ್ವನಾಥ ಜಿದ್ದಿಬಾಗಿಲ, ಮುತ್ತಣ್ಣ ಸಂಗಳದ, ಈರ್ಪ ಸಂಗಳದ, ಶಿವಪ್ರಕಾಶ ಹುಗ್ಗಿ, ಹುಚ್ಚೇಶ ಜವಳಿ, ಅಬ್ದುಲ್ಸಾಬ ಹೊಸಮನಿ, ಬಸಣ್ಣ ಸಂಗಳದ ಸೇರಿದಂತೆ ಮುಂತಾದವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ರಾತ್ರಿ 10 ಗಂಟೆಗೆ ಸ್ವರ ಸಮಾರಾಧನೆ ಸಂಗೀತ ಸಮಾರಾಧನೆ ಕಾರ್ಯಕ್ರಮ ಜರುಗುಲಿದೆ ಎಂದು ಶ್ರೀಮಠವು ಪ್ರಕಟಣೆಯಲ್ಲಿ ತಿಳಿಸಿದೆ.