ಧಾರವಾಡ 29: ಇಲ್ಲಿನ ವಿದ್ಯಾಗಿರಿಯ ಜೆ.ಎಸ್.ಎಸ್ ಮಂಜುನಾಥೇಶ್ವರ ಸಿ.ಬಿ.ಎಸ್.ಇ ಶಾಲೆಯ ಮಕ್ಕಳಿಗಾಗಿ ಆಯೋಜಿಸಲಾಗಿದ್ದ ಗಾಳಿಪಟ ಉತ್ಸವಕ್ಕೆ ಜೆ.ಎಸ್.ಎಸ್ ನ ಕಾರ್ಯದರ್ಶಿ ಡಾ. ಅಜಿತ ಪ್ರಸಾದರವರು ಚಾಲನೆ ನೀಡಿದರು. 200ಕ್ಕೂ ಹೆಚ್ಚು ಮಕ್ಕಳು ಈ ಉತ್ಸವದಲ್ಲಿ ಭಾಗವಹಿಸಿದ್ದರು. ಪ್ರಾಚಾರ್ಯೆ ಸಾಧನಾ ಎಸ್, ಮಹಾವೀರ ಉಪಾದ್ಯೆ, ವಿ.ಕೆ ಭರಣಿ, ಜಿನ್ನಪ್ಪ ಕುಂದಗೋಳ ಇತರರು ಉಪಸ್ಥಿತರಿದ್ದರು.