ರನ್ನ ಬೆಳಗಲಿಯಲ್ಲಿ ಗಾಳಿಪಟ ಉತ್ಸವ
Kite festival in Ranna Belagali
ಮಹಾಲಿಂಗಪುರ 16: ಸಮೀಪದ ಬೆಳಗಳಿಯಲ್ಲಿ ಬೆಳಗಲಿ ವಿದ್ಯಾ ವರ್ಧಕ ಸಂಘದ ಆಶ್ರಯದಲ್ಲಿ. ಎಸ್.ಜಿ.ಎಮ್ ಪದವಿಪೂರ್ವ ಮಹಾವಿದ್ಯಾಲಯದ ದಶಮಾನೋತ್ಸವ ಪ್ರಯುಕ್ತ ಶ್ರೀ ಬಂದ ಲಕ್ಷ್ಮೀ ದೇವಿ ಕ್ರೀಡಾಂಗಣದಲ್ಲಿ ಬುಧವಾರ ದಂದು ಗಾಳಿಪಟ ಉತ್ಸವ ವಿಜೃಂಭಣೆಯಿಂದ ಜರುಗಿತು.
ಉದ್ಘಾಟನೆ ನೆರವೇರಿಸಿ ಮಾತನಾಡಿದ ಸಂಸ್ಥೆ ಛೇರ್ಮನ್ ಪಂಡಿತ ಪೂಜಾರಿ ಭಾರತೀಯ ಪ್ರತಿಯೊಂದು ಹಬ್ಬಗಳಿಗೆ ತನ್ನದೇ ಆದಂತ ಇತಿಹಾಸ ಮತ್ತು ವೈಜ್ಞಾನಿಕ ಕಾರಣಗಳಿವೆ. ಋತುಮಾನಗಳಿಗೆ ತಕ್ಕಂತೆ ನಮ್ಮ ಸಂಸ್ಕೃತಿಯಲ್ಲಿ ಆಹಾರದ ಬದಲಾವಣೆ, ಉಡುಗೆ ತೊಡಗೆಗಳಲ್ಲಿ ಬದಲಾವಣೆಗಳನ್ನು ಕಾಣುತ್ತೇವೆ.ಗಾಳಿಪಟದ ಉತ್ಸವವು ಆಶಾಡ ಮಾಸದ ಪ್ರಮುಖ ಗುಳ್ಳವನ ಹಬ್ಬವಾಗಿದ್ದು ಈ ಸಮಯದಲ್ಲಿ ಮಕ್ಕಳು ಪ್ರಕೃತಿಯ ಜೊತೆಗೆ ಉತ್ತಮ ಬಾಂಧವ್ಯ ಬೆಸೆಯುವ ಹಬ್ಬವಾಗಿದೆ ಎಂದು ತಿಳಿಸಿದರು.
ಪದವಿ ಮತ್ತು ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸುನಿಲ್ ಚರ್ಟಿ, ನಿರಂಜ್ ಛೋಪ್ರಾ, ಪಿ ವಿ ಸಿಂಧೂ ಮತ್ತು ಮೇರಿ ಕೋಮ್ ಎಂಬ ನಾಲ್ಕು ತಂಡಗಳಿಂದ ಗಾಳಿಪಟ ಸ್ಫರ್ಧೆ ಜರುಗಿತು,ವಿದ್ಯಾರ್ಥಿನಿಯರು ಸಾಂಸ್ಕೃತಿಕ ವೃತ್ತಿಗಳಿಗೆ ಹೆಜ್ಜೆ ಹಾಕಿದರು. ಸುಮಾರು 68 ಬಗೆಯ ಖಾದ್ಯಗಳ ಭರ್ಜರಿ ಭೋಜನ ಜರುಗಿತು.
ಹಿರಿಯರಾದ ಚಿಕ್ಕಪ್ಪ ನಾಯಕ, ಕಾಡಯ್ಯ ಗಣಾಚಾರಿ, ಮುತ್ತಪ್ಪ ಹೊಸಪೇಟಿ, ಶೇಖರ ಭದ್ರಶೆಟ್ಟಿ, ಸಂಗನಗೌಡ ಪಾಟೀಲ, ಪಿ ಜಿ ಸನ್ನಟ್ಟಿ, ಪ್ರಾಚಾರ್ಯರಾದ ಪರಶುರಾಮ ನಾಯಕ, ಯೋಗ ಶಿಕ್ಷಕರಾದ ರಾಘವೇಂದ್ರ ನೀಲನ್ನವರ ಸಂಸ್ಥೆಯ ಪದಾಧಿಕಾರಿಗಳು, ಉಪನ್ಯಾಸಕರು ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 