ಕಿತ್ತೂರು ಉತ್ಸವ: ವೀರಜ್ಯೋತಿಗೆ ಅದ್ದೂರಿ ಸ್ವಾಗತ
ಬೆಳಗಾವಿ 17:
ಕಿತ್ತೂರು ಉತ್ಸವದ ಅಂಗವಾಗಿ ಜಿಲ್ಲೆಯಲ್ಲಿ ಸಂಚಾರ ಕೈಗೊಂಡಿರುವ ವೀರಜ್ಯೋತಿ 17 ರಂದು ನಗರದ ಚನ್ನಮ್ಮ
ವೃತ್ತದಲ್ಲಿ ಸಂಭ್ರಮದಿಂದ ಬರಮಾಡಿಕೊಳ್ಳಲಾಯಿತು. ವೀರಜ್ಯೋತಿ ಹೊತ್ತು ಖಾನಾಪುರದಿಂದ ಆಗಮಿಸಿದ ವಾಹನಕ್ಕೆ ಸಂಸದ ಸುರೇಶ ಅಂಗಡಿ,
ಶಾಸಕ ಅನಿಲ್ ಬೆನಕೆ ಹಾಗೂ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ
ಅವರು ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು.
ನಂತರ ಮಾತನಾಡಿದ ಸಂಸದ
ಸುರೇಶ ಅಂಗಡಿ ಅವರು, "ಸ್ವಾತಂತ್ರ್ಯದ ಕಿಚ್ಚು ಹೊತ್ತಿಸಿದ ವೀರ ರಾಣಿ ಕಿತ್ತೂರು
ಚನ್ನಮ್ಮನ ವಿಜಯೋತ್ಸವದ ಅಂಗವಾಗಿ ಪ್ರತಿವರ್ಷ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಕಿತ್ತೂರು ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ
ಅವರ ಹೋರಾಟದ ಬದುಕಿನ ಮೇಲೆ ಬೆಳಕು ಚೆಲ್ಲುವ
ಈ ಉತ್ಸವವನ್ನು ಮುಂಬರುವ ದಿನಗಳಲ್ಲಿ ಇನ್ನಷ್ಟು ಅದ್ಧೂರಿಯಾಗಿ ಆಚರಿಸಲು ಸಕರ್ಾರ ಹೆಚ್ಚಿನ ನೆರವು ಒದಗಿಸಬೇಕಿದೆ" ಎಂದು ಹೇಳಿದರು.
ವೀರಜ್ಯೋತಿ ಸ್ವಾಗತಿಸಿದ ಬಳಿಕ ಸಂಸದ ಸುರೇಶ
ಅಂಗಡಿ, ಶಾಸಕ ಅನಿಲ್ ಬೆನಕೆ
ಹಾಗೂ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಕಿತ್ತೂರು ಚನ್ನಮ್ಮ
ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಉಪ ವಿಭಾಗಾಧಿಕಾರಿ ಡಾ.ಕವಿತಾ ಯೋಗಪ್ಪನವರ, ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿದರ್ೇಶಕ ಗುರುನಾಥ ಕಡಬೂರ, ತಹಶೀಲ್ದಾರ ಮಂಜುಳಾ ನಾಯಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದರ್ೇಶಕ ಶ್ರೀಶೈಲ್ ಕರಿಶಂಕರಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬೈಲಹೊಂಗಲದಿಂದ ಅಕ್ಟೋಬರ್ 16 ರಂದು ಹೊರಟಿರುವ ವೀರಜ್ಯೋತಿಯು
ಖಾನಾಪುರ ಮಾರ್ಗವಾಗಿ ಬೆಳಗಾವಿ ನಗರವನ್ನು ಪ್ರವೇಶಿಸಿತು. ವೀರಜ್ಯೋತಿಯನ್ನು ರೈಲ್ವೆ ನಿಲ್ದಾಣದ ಬಳಿಯ ಗೋಗಟೆ ವೃತ್ತದಿಂದ
ಮೆರವಣಿಗೆ ಮೂಲಕ ಕರೆತರಲಾಯಿತು. ವೀರಜ್ಯೋತಿಯು
ಗುರುವಾರ(ಅ.18) ಹುಕ್ಕೇರಿ ತಾಲ್ಲೂಕಿನಲ್ಲಿ ಸಂಚರಿಸಲಿದ್ದು, ಅ.22 ರಂದು ಸಂಜೆ
ಕಿತ್ತೂರು ಸೈನಿಕ ಶಾಲೆ ತಲುಪಲಿದೆ. ಉತ್ಸವದ
ದಿನವಾದ ಅ.23 ರಂದು ಬೆಳಿಗ್ಗೆ
9 ಗಂಟೆಗೆ ಕಿತ್ತೂರು ಪ್ರವೇಶಿಸಲಿದೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 