ಮಂಡಿಚಿಪ್ಪಿನ ಶಸ್ತ್ರಚಿಕಿತ್ಸೆ: ನಟ ರಜನಿಕಾಂತ್ ಸೋದರ ಚೇತರಿಕೆ
ಬೆಂಗಳೂರು, ಸೂಪರ್ ಸ್ಟಾರ್ ರಜನಿಕಾಂತ್ ಅವರ ಸಹೋದರ ಸತ್ಯನಾರಾಯಣ ಗಾಯಕ್ ವಾಡ್ (77) ಅವರಿಗೆ ನಡೆಸಿದ ಮಂಡಿಚಿಪ್ಪು ಬದಲಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ
ಅಪೊಲೊ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆದಿದ್ದ, ರಜನಿಕಾಂತ್ ಅವರು ಗುರುವಾರ ಆಸ್ಪತ್ರೆಗೆ ನೀಡಿ ಶೀಘ್ರ ಗುಣಮುಖರಾಗುವಂತೆ ಸಹೋದರನಿಗೆ ಹಾರೈಸಿದರು
ಬೆಂಗಳೂರಿನಲ್ಲಿಯೇ ಬೆಳೆದ ರಜನಿಕಾಂತ್ ಯಾವುದೇ ಮಾಹಿತಿ ನೀಡದೆ ಆಗಾಗ್ಗೆ ನಗರಕ್ಕೆ ಭೇಟಿ ನೀಡುತ್ತಿರುತ್ತಾರೆ ಗುರುವಾರವೂ ಸಹ ಯಾರಿಗೂ ತಿಳಿಸದೆ ಸಹೋದರನ ಭೇಟಿಗೆ ಬಂದಿದ್ದರಾದರೂ, ಯಾವುದೋ ಮೂಲದಿಂದ ಭೇಟಿಯ ಬಗ್ಗೆ ತಿಳಿದುಕೊಂಡ ಅನೇಕ ಅಭಿಮಾನಿಗಳು ಶೇಷಾದ್ರಿಪುರಂ ನಲ್ಲಿರುವ ಆಸ್ಪತ್ರೆಗೆ ಆಗಮಿಸಿ ಸೂಪರ್ ಸ್ಟಾರ್ ನನ್ನು ಭೇಟಿಯಾದರು
ಶಸ್ತ್ರಚಿಕಿತ್ಸೆಗೆ ಒಳಗಾದ ಗಾಯಕ್ ವಾಡ್ (77) ಚೆನ್ನಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮೂಳೆಚಿಕಿತ್ಸಕ ಕಿರಣ್ ಚೌಕಾ ಮಾಹಿತಿ ನೀಡಿದ್ದಾರೆ. 'ಮಂಡಿ ಚಿಪ್ಪಿನ ಬದಲಿ ಶಸ್ತ್ರಚಿಕಿತ್ಸೆಯ ನಂತರ ಅವರಿಗೆ ನಡೆಯಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು. ನಟನ ಸಹೋದರನಿಗೆ ಮೊಣಕಾಲಿನಲ್ಲಿ ತೀವ್ರವಾದ ಅಸ್ಥಿ ಸಂಧಿವಾತವಿತ್ತು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 