ಮಾರುತಿ ನಗರದಲ್ಲಿ ಜ್ಞಾನ ವಿಕಾಸ ಕೇಂದ್ರ ಕೌಶಲ್ಯ ತರಬೇತಿ
Knowledge Development Center Skill Training in Maruti Nagar
ಮಾರುತಿ ನಗರದಲ್ಲಿ ಜ್ಞಾನ ವಿಕಾಸ ಕೇಂದ್ರ ಕೌಶಲ್ಯ ತರಬೇತಿ
ರಾಣೇಬೆನ್ನೂರು 18: ಇಲ್ಲಿನ ಮಾರುತಿ ನಗರ ವಲಯದ ಬೆಳಕು ಜ್ಞಾನ ವಿಕಾಸ ಕೇಂದ್ರ ಯೋಜನೆಯಲ್ಲಿ ಮಹಿಳೆಯರಿಗಾಗಿ ಧಾರವಾಡ ಜ್ಞಾನ ವಿಕಾಸ ತರಬೇತಿ ಸಂಸ್ಥೆಯ ಕೌಶಲ್ಯಕಲೆಗಳ ತರಬೇತಿಗಾರರು ಆಯೋಜಿಸಿತ್ತು. 6 ದಿವಸಗಳ ಕಾಲ ನಡೆದ ಸೀರೆ ಗುಚ್ಛ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವು, ಮಂಗಳವಾರ ನಡೆಯಿತು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಜಗದೀಶ ಆಲ್ಸ್ ಅವರು, ಮಹಿಳೆಯರ ಆರ್ಥಿಕ ಸಮಾನತೆಗೆ ಕರಕುಶಲ ಕಲೆಗಳ ತರಬೇತಿ ಅತ್ಯಂತ ಸಹಕಾರಿಯಾಗಿದೆ. ಕೌಶಲ್ಯ ಕಲೆಗಳು ಸ್ತ್ರೀಯರಿಗೆ ದೈವದತ್ತ ಕೊಡುಗೆ, ನಿತ್ಯದ ಬದುಕಿನಲ್ಲಿ ಅವುಗಳನ್ನು ಕೌಶಲ್ಯ ಪೂರ್ಣವಾಗಿ ಅಳವಡಿಸಿಕೊಂಡರೆ, ಕುಟುಂಬದ ನಿರ್ವಹಣೆಯ ಜೊತೆಗೆ ದೇಶದ ಆರ್ಥಿಕ ಸಮಾನತೆಗೆ ಪ್ರಮುಖ ಕಾರಣವಾಗುತ್ತದೆ ಎಂದರು. ತರಬೇತಿ ಪಡೆದ 35 ಮಹಿಳೆಯರಿಗೆ ಸಂಸ್ಥೆ ಕೂಡಮಾಡುವ ತರಬೇತಿ ಪ್ರಮಾಣ ಪತ್ರವನ್ನು ವಿತರಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶೋಭಾ,ಸೇವಾ ಪ್ರತಿನಿಧಿ ಭೂಮಿಕಾ, ತರಬೇತಿ ಶಿಕ್ಷಕಿ ಸುಮಾ ಮತ್ತು ಸದಸ್ಯರು ಹಾಗೂ ಯೋಜನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 