ಸಾಮಾಜಿಕ ಅಂತರಕ್ಕೆ ಕೊಹ್ಲಿ ಮನವಿ
ನವದೆಹಲಿ, ಮಾ 27,ಸಾಂಕ್ರಮಿಕ ರೋಗ ಕೊರೊನಾ ವೈರಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ದೇಶದ ನಾಗರಿಕರಿಗೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೃದಯ ಪೂರ್ವಕ ಮನವಿ ಮಾಡಿದ್ದಾರೆ.ಕಳೆದ ಕೆಲವು ದಿನಗಳಿಂದ, ಕೆಲವು ಜನರು ಇನ್ನೂ ಬೀದಿಗಿಳಿಯುವುದನ್ನು ನೋಡಿರುವ ಕೊಹ್ಲಿ, ಇಂತವರು ದೇಶದ ಬಗ್ಗೆ ಪ್ರಾಮಾಣಿಕತೆ ಹೊಂದಿಲ್ಲ ಎಂದು ಖೇದ ವ್ಯಕ್ತಪಡಿಸಿದ್ದಾರೆ. ತಮ್ಮ ಟ್ವೀಟರ್ ನಲ್ಲಿ ಶುಕ್ರವಾರ ಸಣ್ಣದೊಂದು ವಿಡಿಯೊ ಹಂಚಿಕೊಂಡಿರುವ ಕೊಹ್ಲಿ, '' ದಯವಿಟ್ಟು ಪರಿಸ್ಥಿತಿಯ ವಾಸ್ತವತೆ ಮತ್ತು ಗಂಭೀರತೆಗೆ ಎಚೆತ್ತು ಜವಾಬ್ದಾರಿಯನ್ನು ತೆಗೆದುಕೊಳ್ಳಿ. ರಾಷ್ಟ್ರಕ್ಕೆ ನಮ್ಮ ಬೆಂಬಲ ಮತ್ತು ಪ್ರಾಮಾಣಿಕತೆ ಬೇಕಿದೆ " " ಇಂದು, ನಾನು ನಿಮ್ಮೊಂದಿಗೆ ದೇಶದ ಪ್ರಜೆಯಾಗಿ ಮಾತನಾಡುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನಾನು ಹಲವು ಘಟನೆಗಳನ್ನು ನೋಡಿದ್ದೇನೆ, ಜನರು ಲಾಕ್ಡೌನ್ ಅನುಸರಿಸದಿರುವುದನ್ನು ಕಂಡಿದ್ದೇನೆ, ಕೆಲವರು ಕೋವಿಡ್-19 ವಿರುದ್ಧದ ಹೋರಾಟವನ್ನು ಬಹಳ ಲಘುವಾಗಿ ತೆಗೆದುಕೊಳ್ಳುತ್ತಿದ್ದಾರೆ ಎಂದು ನನಗೆ ಅನಿಸುತ್ತಿದೆ. ದಯವಿಟ್ಟು ಸಾಮಾಜಿಕ ಅಂತರವನ್ನು ಪಾಲಿಸಲು ನಾನು ನಿಮ್ಮೆಲ್ಲರನ್ನೂ ವಿನಂತಿಸುತ್ತೇನೆ, ಸರ್ಕಾರ ನಿಮ್ಮಿಂದ ಏನು ಆಪೇಕ್ಷಿಸುತ್ತದೆಯೋ ಅದನ್ನು ದಯವಿಟ್ಟು ಮಾಡಿ, ಎಂದು ಕೊಹ್ಲಿ ಹೇಳಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 