ಶ್ರೇಷ್ಠ ಬ್ಯಾಟ್ಸಮನ್ ಎಂಬುದನ್ನು ಕೊಹ್ಲಿ ಸಾಬೀತು ಪಡಿಸಲಿದ್ದಾರೆ: ರವಿಶಾಸ್ತ್ರಿ
ಲಂಡನ್ 30: ವಿರಾಟ್ ಕೊಹ್ಲಿ ತಾನೇಕೆ ವಿಶ್ವದ ಶ್ರೇಷ್ಠ ಬ್ಯಾಟ್ಸಮನ್ ಎಂಬುದನ್ನು ಇಂಗ್ಲೆಂಡ್ ನೆಲದಲ್ಲಿ ಸಾಬೀತು ಪಡಿಸಲಿದ್ದಾರೆ ಎಂದು ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ.
ಇದೇ ಬುಧವಾರದಿಂದ ಎಡ್ಜ್ ಬ್ಯಾಸ್ಟನ್ ನಲ್ಲಿ ಇಂಗ್ಲೆಂಡ್ ಮತ್ತು ಭಾರತ ನಡುವೆ ಮೊದಲ ಟೆಸ್ಟ್ ಪಂದ್ಯ ಆರಂಭವಾಗುತ್ತಿದ್ದು, ಈ ಸಂಬಂಧ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರವಿಶಾಸ್ತ್ರಿ, ನಾಲ್ಕು ವರ್ಷಗಳ ಹಿಂದೆ ಇಂಗ್ಲೆಂಡ್ ಪ್ರವಾಸ ಮಾಡಿದ್ದ ವಿರಾಟ್ ಕೊಹ್ಲಿ ಪ್ರಸ್ತುತ ಇರುವ ವಿರಾಟ್ ಕೊಹ್ಲಿಗೂ ಸಾಕಷ್ಟು ವ್ಯತ್ಯಾಸವಿದೆ. ಖಂಡಿತಾ ಕೊಹ್ಲಿ ತಾವೇಕೆ ವಿಶ್ವದ ಶ್ರೇಷ್ಠ ಬ್ಯಾಟ್ಸಮನ್ ಎಂಬುದನ್ನು ಸಾಬೀತು ಪಡಿಸಲಿದ್ದಾರೆ ಎಂದು ಹೇಳಿದರು.
'ಕೊಹ್ಲಿ ಬ್ಯಾಟಿಂಗ್ ದತ್ತಾಂಶಗಳನ್ನು ಗಮನಿಸಿದರೆ ಈ ಬಗ್ಗೆ ಉತ್ತರ ಸಿಗುತ್ತದೆ. ಕಳೆದ ನಾಲ್ಕು ವರ್ಷಗಳಲ್ಲಿ ಆತನ ಬ್ಯಾಟಿಂಗ್ ಸಾಧನೆ ಏನು ಎಂಬುದನ್ನು ನಾನು ಒತ್ತಿ ಹೇಳಬೇಕಿಲ್ಲ. ನಾಲ್ಕು ವರ್ಷಗಳ ಹಿಂದಿನ ಕೊಹ್ಲಿಗೂ ಪ್ರಸ್ತುತ ಇರುವ ಕೊಹ್ಲಿಗೂ ಸಾಕಷ್ಟು ವ್ಯತ್ಯಾಸಗಳಿವೆ. ಎಂತಹುದೇ ಕಠಿಣ ಪರಿಸ್ಥಿತಿಯನ್ನೂ ಕೊಹ್ಲಿ ನಿಭಾಯಿಸುವ ದೈಹಿಕ ಮತ್ತು ಮಾನಸಿಕ ಸಾಮಥ್ರ್ಯ ಹೊಂದಿದ್ದಾರೆ. ಎಲ್ಲ ಸರಣಿಗಳನ್ನೂ ನಾವು ಗೆಲ್ಲಲೆಂದೇ ಆಡುವುದು. ಈ ಸರಣಿಯನ್ನೂ ಕೂಡ. ಆಕ್ರಮಣಕಾರಿ ಮನೋಭಾವ ತಪ್ಪೇನಲ್ಲ. ಆದರೆ ಅದು ಎಲ್ಲೆ ಮೀರಬಾರದು. ಕೇವಲ ಅಂಕಿಸಂಖ್ಯೆಗೋ ಅಥವಾ ಪಂದ್ಯವನ್ನು ಡ್ರಾ ಮಾಡಿಕೊಳ್ಳಲು ನಾವು ಇಲ್ಲಿಗೆ ಬಂದಿಲ್ಲ. ಸರಣಿ ಗೆಲುವು ನಮ್ಮ ಗುರಿ ಎಂದು ಶಾಸ್ತ್ರಿ ಹೇಳಿದರು.
ಟೆಸ್ಟ್ ಕ್ರಿಕೆಟ್ ನಲ್ಲಿ ಇತ್ತೀಚೆಗಿನ ತಂಡದ ಸಾಧನೆ ಅತ್ಯುತ್ತಮವಾಗಿದೆ. ಕಳೆದ ನಾಲ್ಕೈದು ಸರಣಿಗಳಲ್ಲಿ ನಾವು ಉತ್ತಮ ಕ್ರಿಕೆಟ್ ಪ್ರದರ್ಶನ ನೀಡಿದ್ದೇವೆ. ನಮ್ಮ ಸಾಮಥ್ರ್ಯಕ್ಕೆ ತಕ್ಕಂತೆ ನಾವು ಆಡಿದರೆ ಖಂಡಿತಾ ಸರಣಿ ಗೆಲುವು ನಮ್ಮದೇ. ವಿದೇಶಗಳಲ್ಲಿ ತಂಡದ ಪ್ರದರ್ಶನದ ಕುಂಠಿತವಾಗಿರಬಹುದು. ಆದರೆ ವಿಶ್ವದ ಯಾವುದೇ ತಂಡ ಕೂಡ ವಿದೇಶಗಳಲ್ಲಿ ಉತ್ತಮ ಪ್ರದರ್ಶನ ನೀಡಿಲ್ಲ. ವಿದೇಶಿ ಸರಣಿಗಳಲ್ಲಿ ಪ್ರವಾಸಿ ತಂಡಕ್ಕೆ ಹಿನ್ನಡೆ ಸಾಮಾನ್ಯವೇ ಆದರೂ ಇಂಗ್ಲೆಂಡ್ ಸರಣಿ ಇದಕ್ಕೆ ತದ್ವಿರುದ್ಧವಾಗುತ್ತದೆ ಎಂದು ಹೇಳಿದರು.
ಇನ್ನು ತಂಡಕ್ಕೆ ತಲೆನೋವಾಗಿರುವ 3 ಮತ್ತು ನಾಲ್ಕನೇ ಕ್ರಮಾಂಕದ ಕುರಿತು ಮಾತನಾಡಿದ ಶಾಸ್ತ್ರಿ, ನಮಗೂ ಆ ಬಗ್ಗೆ ಚಿಂತೆ ಇದೆ. ಆದರೆ ಚೇತೇಶ್ವರ ಪೂಜಾರ 3ನೇ ಕ್ರಮಾಂಕದಲ್ಲಿ ಆಡುವುದರಿಂದ ಆ ಬಗ್ಗೆ ಹೆಚ್ಚಿನ ಒತ್ತಡವಿಲ್ಲ. ಪೂಜಾರ ಅನುಭವಿ ಆಟಗಾರನಾಗಿದ್ದು, ಫಾಮರ್್ಗೆ ಮರಳಿರುವುದು ಖುಷಿಯ ವಿಚಾರ ಎಂದು ಹೇಳಿದರು. ಅಂತೆಯೇ ತಂಡದಲ್ಲಿ ಕೆಎಲ್ ರಾಹುಲ್ ಗೂ ಅವಕಾಶ ನೀಡುವ ಕುರಿತು ಪರೋಕ್ಷ ಮಾಹಿತಿ ನೀಡಿದ ಶಾಸ್ತ್ರಿ, ಮೂರನೇ ಆರಂಭಿಕ ಆಟಗಾರನಾಗಿ ರಾಹುಲ್ ರನ್ನು ಆಯ್ಕೆ ಮಾಡಲಾಗಿದೆ. ಆದರೆ ಆತನ ಯಾವುದೇ ಕ್ರಮಾಂಕಕ್ಕೆ ಹೊಂದಿಕೊಳ್ಳುವ ಸಾಮಥ್ರ್ಯ ತಂಡಕ್ಕೆ ಮತ್ತಷ್ಟು ಬಲ ತಂದಿದೆ ಎನ್ನುವ ಮೂಲಕ ಪೂಜಾರ ಮತ್ತು ರಾಹುಲ್ ಇಬ್ಬರಿಗೂ ತಂಡದಲ್ಲಿ ಅವಕಾಶ ನೀಡುವ ಕುರಿತು ರವಿಶಾಸ್ತ್ರಿ ಹೇಳಿದರು.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 