ಕೂಡ್ಲಿಗಿ: ಉತ್ತಮ ಮಳೆ ನೀರು ಕಂಡ ಕೆರೆಗಳು ರೈತರಲ್ಲಿ ಹರ್ಷ
ಲೋಕದರ್ಶನ ವರದಿ
ಕೂಡ್ಲಿಗಿ 07: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಉತ್ತಮ ಮಳೆಯಾಗಿದ್ದು, ಕೆರೆ ಕಟ್ಟೆಗಳಿಗೆ ನೀರು ಬಂದು, ರೈತರಲ್ಲಿ ಹರ್ಷ ಮೂಡಿದೆ.
ಬಾರಿ ಗಾಳಿ, ಗುಡುಗು ಸಿಡಿಲಿನಿಂದ ಕೂಡಿದ್ದ ಮಳೆ ಮುಕ್ಕಾಲು ಗಂಟೆಗೂ ಹೆಚ್ಚು ಕಾಲ ಸುರಿಯಿತು. ಇದರಿಂದ ಬಹುತೇಕ ಹಳ್ಳಗಳು ತುಂಬಿ ಹರಿದಿದ್ದು, ಕೆರೆ ಕಟ್ಟೆಗಳಿಗೆ ಸಾಕಷ್ಟು ನೀರು ಬಂದು ನಿಂತಿವೆ. ಇದರಿಂದ ರೈತರು ಬಿತ್ತನೆ ಮಾಡಲು ಅನುಕೂಲವಾಗಿದೆ.
ಪಟ್ಟಣದ ಸೊಲ್ಲಮ್ಮ ಮರದ ಹತ್ತಿರ ಹಳ್ಳಕ್ಕೆ ಅಡ್ಡವಾಗಿ ನಿರ್ಮಿಸಿರುವ ಸೇತುವೆಗೆ ಕಟ್ಟಿಗೆ, ಕಸ, ಕಡ್ಡಿ ಬಂದು ಅಡ್ಡ ನಿಂತಿದ್ದರಿಂದ ನೀರು ಮುಂದೆ ಹೋಗಲು ಸ್ಥಳವಿಲ್ಲದೆ ಅಕ್ಕ ಪಕ್ಕದ ಮನೆಗಳಿಗೆ ನುಗ್ಗಿವೆ. ಅಲ್ಲದೆ ಕೊಟ್ಟೂರು ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲೂ ನೀರು ನಿಂತು ಸ್ಥಳೀಯರು ಪರದಾಡುವಂತಾಗಿದ್ದು, ಈ ರಸ್ತೆ ಮುಖಾಂತರ ಶಾಲೆಗ ಹೋಗುವ ವಿದ್ಯಾರ್ಥಿಗಳು ಜೀವ ಭಯದಲ್ಲಿಯೇ ನೀರನ್ನು ದಾಟಿಕೊಂಡೆ ಮುಂದೆ ಸಾಗಿದರು.
ಇತ್ತ ಕೊಟ್ಟೂರು ರಸ್ತೆಯಲ್ಲಿ ರಾಷ್ಟ್ರೀಯ ಹೆದ್ದಾರಿ ನಿಮರ್ಿಸುವ ಕಾರ್ಯ ನಡೆದಿದ್ದು, ಬಡೇಲಡಕು ರಸ್ತೆಯ ಭಾಗದಿಂದ ಬರುವ ನೀರನ್ನು ಹಳ್ಳಕ್ಕೆ ಹೋಗಲು ಸೂಕ್ತ ಜಾಗವಿಲ್ಲದೆ ಸುಮಾರು ಮೂನರ್ಾಲ್ಕು ಮನೆಗಳಲ್ಲಿ ನೀರು ನಿಂತು ಮನೆಗಳಲ್ಲಿನ ಸಮಾನುಗಳು ನೀರಿನಲ್ಲಿ ತೇಲಿ ಹೋಗಿದ್ದು, ಅಕ್ಕಿ ಸೇರಿದಂತೆ ದಿನ ಬಳಕೆ ವಸ್ತುಗಳು ನೀರಿನಲ್ಲಿ ಮುಳುಗಿವೆ. ಇದರಿಂದ ಜನರು ರಾತ್ರಿಯಲ್ಲ ಜಾಗರಣೆ ಮಾಡುವಂತಾಗಿದೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 