ಕೂಡ್ಲಿಗಿ: ಉತ್ತಮ ಮಳೆ ನೀರು ಕಂಡ ಕೆರೆಗಳು ರೈತರಲ್ಲಿ ಹರ್ಷ
ಲೋಕದರ್ಶನ ವರದಿ
ಕೂಡ್ಲಿಗಿ 07: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಉತ್ತಮ ಮಳೆಯಾಗಿದ್ದು, ಕೆರೆ ಕಟ್ಟೆಗಳಿಗೆ ನೀರು ಬಂದು, ರೈತರಲ್ಲಿ ಹರ್ಷ ಮೂಡಿದೆ.
ಬಾರಿ ಗಾಳಿ, ಗುಡುಗು ಸಿಡಿಲಿನಿಂದ ಕೂಡಿದ್ದ ಮಳೆ ಮುಕ್ಕಾಲು ಗಂಟೆಗೂ ಹೆಚ್ಚು ಕಾಲ ಸುರಿಯಿತು. ಇದರಿಂದ ಬಹುತೇಕ ಹಳ್ಳಗಳು ತುಂಬಿ ಹರಿದಿದ್ದು, ಕೆರೆ ಕಟ್ಟೆಗಳಿಗೆ ಸಾಕಷ್ಟು ನೀರು ಬಂದು ನಿಂತಿವೆ. ಇದರಿಂದ ರೈತರು ಬಿತ್ತನೆ ಮಾಡಲು ಅನುಕೂಲವಾಗಿದೆ.
ಪಟ್ಟಣದ ಸೊಲ್ಲಮ್ಮ ಮರದ ಹತ್ತಿರ ಹಳ್ಳಕ್ಕೆ ಅಡ್ಡವಾಗಿ ನಿರ್ಮಿಸಿರುವ ಸೇತುವೆಗೆ ಕಟ್ಟಿಗೆ, ಕಸ, ಕಡ್ಡಿ ಬಂದು ಅಡ್ಡ ನಿಂತಿದ್ದರಿಂದ ನೀರು ಮುಂದೆ ಹೋಗಲು ಸ್ಥಳವಿಲ್ಲದೆ ಅಕ್ಕ ಪಕ್ಕದ ಮನೆಗಳಿಗೆ ನುಗ್ಗಿವೆ. ಅಲ್ಲದೆ ಕೊಟ್ಟೂರು ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲೂ ನೀರು ನಿಂತು ಸ್ಥಳೀಯರು ಪರದಾಡುವಂತಾಗಿದ್ದು, ಈ ರಸ್ತೆ ಮುಖಾಂತರ ಶಾಲೆಗ ಹೋಗುವ ವಿದ್ಯಾರ್ಥಿಗಳು ಜೀವ ಭಯದಲ್ಲಿಯೇ ನೀರನ್ನು ದಾಟಿಕೊಂಡೆ ಮುಂದೆ ಸಾಗಿದರು.
ಇತ್ತ ಕೊಟ್ಟೂರು ರಸ್ತೆಯಲ್ಲಿ ರಾಷ್ಟ್ರೀಯ ಹೆದ್ದಾರಿ ನಿಮರ್ಿಸುವ ಕಾರ್ಯ ನಡೆದಿದ್ದು, ಬಡೇಲಡಕು ರಸ್ತೆಯ ಭಾಗದಿಂದ ಬರುವ ನೀರನ್ನು ಹಳ್ಳಕ್ಕೆ ಹೋಗಲು ಸೂಕ್ತ ಜಾಗವಿಲ್ಲದೆ ಸುಮಾರು ಮೂನರ್ಾಲ್ಕು ಮನೆಗಳಲ್ಲಿ ನೀರು ನಿಂತು ಮನೆಗಳಲ್ಲಿನ ಸಮಾನುಗಳು ನೀರಿನಲ್ಲಿ ತೇಲಿ ಹೋಗಿದ್ದು, ಅಕ್ಕಿ ಸೇರಿದಂತೆ ದಿನ ಬಳಕೆ ವಸ್ತುಗಳು ನೀರಿನಲ್ಲಿ ಮುಳುಗಿವೆ. ಇದರಿಂದ ಜನರು ರಾತ್ರಿಯಲ್ಲ ಜಾಗರಣೆ ಮಾಡುವಂತಾಗಿದೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 