ಕೂಡ್ಲಿಗಿ: ಬೆಳೆ ಹಾನಿ ಸಮೀಕ್ಷೆ
ಲೋಕದರ್ಶನ ವರದಿ
ಕೂಡ್ಲಿಗಿ28: ತಾಲ್ಲೂಕಿನಲ್ಲಿ ಕಳೆದ ಒಂದು ತಿಂಗಳಿನಿಂದ ಸಮರ್ಪಕ ಮಳೆ ಇಲ್ಲದೆ ಮುಂಗಾರು ಆರಂಭದಲ್ಲಿ ಬಿತ್ತನೆ ಮಾಡಿದ್ದ ಜೋಳ ಹಾಗೂ ಮೆಕ್ಕೆ ಜೋಳ ಬೆಳವಣಿಗೆಯಲ್ಲಿ ಕುಂಟಿತಗೊಂಡಿದ್ದು, ಬೆಳೆ ನಷ್ಟವಾಗಿರುವ ಬಗ್ಗೆ ತಾಲ್ಲೂಕಿನಾದ್ಯಂತ ಬೆಳೆ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ತಹಶೀಲ್ದಾರ್ ಎಲ್. ಕೃಷ್ಣಮೂತರ್ಿ ತಿಳಿಸಿದ್ದಾರೆ.ಅವರು ಕೂಡ್ಲಿಗಿ ಹಾಗೂ ಗುಡೇಕೋಟೆ ಹೋಬಳಿ ವ್ಯಾಪ್ತಿಯ ಕೆಲ ರೈತರ ಹೊಲಗಳಿಗೆ ಭೇಟಿ ನೀಡಿ ಮಾತನಾಡಿದರು.
ಜೋಳ ಹಾಗೂ ಮೆಕ್ಕೆ ಜೋಳದ ಬಿತ್ತನೆ ಮಾಡಿ ಈಗಾಗಲೇ ಸುಮಾರು 80 ದಿನಗಳು ಕಳೆದು ಹೋಗಿವೆ. ಇದರಿಂದ ಈಗ ಮಳೆ ಬಂದರೂ ಅವುಗಳಲ್ಲಿ ತೆನೆ ಬಿಟ್ಟು ಕಾಳು ಕಟ್ಟುವ ಯಾವುದೇ ಭರವಸೆ ಇಲ್ಲ. ಇದರಿಂದ ರೈತರು ಈ ಬೆಳೆಗಳನ್ನು ಕಿತ್ತು ಹಾಕುತ್ತಿದ್ದು, ಬೆಳೆ ನಷ್ಟದ ಬಗ್ಗೆ ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆ, ತಾಲ್ಲೂಕು ಪಂಚಾಯ್ತಿ ವತಿಯಿಂದ ಜಂಟಿ ಸಮೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಿದರು.
ಮುಂಗಾರಿನಲ್ಲಿ ಉತ್ತಮವಾಗಿ ಸುರಿದ ಮಳೆ ನಂತರ ಸಂಪೂರ್ಣ ಕೈಕೊಟ್ಟೀದೆ. ಮುಂದೆ ಮಳೆ ಬಂದರೆ ಪರ್ಯಯವಾಗಿ ರೈತರು ಯಾವ ಬೆಳೆಯನ್ನು ಬೆಳೆಯಬೇಕು ಎಂಬುದರ ಬಗ್ಗೆ ಶೀಘ್ರದಲ್ಲಿಯೇ ಮಾಹಿತಿ ನೀಡಲಾಗುತ್ತದೆ ಎಂದು ಕೃಷಿ ಇಲಾಖೆಯ ಸಹಾಯಕ ನಿದರ್ೇಶಕ ಎನ್.ವಿ. ಪ್ರಕಾಶ್ ತಿಳಿಸಿದರು.
ಈಗ ಬಿತ್ತನೆ ಮಾಡಿರುವ ಜೋಳ, ಮೆಕ್ಕೆ ಜೋಳ, ಹತ್ತಿ, ಸೂರ್ಯಕಾಂತಿ ಬೆಳೆಗಳಿಗೆ ಇದೇ 31ರವರೆಗೂ ಬೆಳೆ ವಿಮೆ ಮಾಡಿಸಲು ಅವಕಾಶವಿದ್ದು, ರೈತರು ಬೆಳೆ ವಿಮೆ ಮಾಡಿಸಿದಲ್ಲಿ ಮುಂದೆ ಹೆಚ್ಚು ಅನುಕೂಲವಾಗಲಿದೆ. ಬಿತ್ತನೆ ಮಾಡಿದ ಬೆಳೆಗಳನ್ನು ಕೀಳುವ ಮುನ್ನಾ ರೈತರು ತಮ್ಮ ಪಹಣೆಯಲ್ಲಿ ಬೆಳೆ ನಮೂದು ಮಾಡಬೇಕು ಎಂದು ಅವರು ತಿಳಿಸಿದರು. ತಾಲ್ಲೂಕು ಪಂಚಾಯ್ತಿ ಯೋಜನಾಧಿಕಾರಿ ಬೋರಣ್ಣ ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 