ಕೊಪ್ಪಳ: ಸಿಎಂ ಕುಮಾರಸ್ವಾಮಿ ವರ್ತನೆ ಸರಿಯಾಗಿಲ್ಲ: ಬಿಎಸ್ವೈ ವಾಗ್ದಾಳಿ
ಲೋಕದರ್ಶನ ವರದಿ
ಕೊಪ್ಪಳ 13: ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವರ್ತನೆ ಸರಿಯಾಗಿಲ್ಲ, ಹಗುರವಾದ ಮಾತನಾಡುವ ಮೂಲಕ ಲೋಕಸಭೆ ಚುನಾವಣೆಯಲ್ಲಿ ವಾತಾವರಣ ನಮ್ಮ ಪರ ಇಲ್ಲ ಎಂದು ಅವರೇ ತೋರಿಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಕೊಪ್ಪಳದ ಬಳಿ ಬಸಾಪೂರು ಖಾಸಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, 2014ಕ್ಕೆ ಹೋಲಿಕೆ ಮಾಡಿದರೆ ಬಿಜೆಪಿಗೆ ಈಗ ಒಳ್ಳೆಯ ವಾತಾವರಣವಿದೆ. ಮಂಡ್ಯದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಗೆಲ್ಲುವುದು ಖಚಿತವಾದ ನಂತರ ಕುಮಾರಸ್ವಾಮಿ ಮನಬಂದಂತೆ ಮಾತಾಡ್ತಿದ್ದಾರೆ ಎಂದರು.
ಕೇಂದ್ರದ ಪ್ರಧಾನ ಮಂತ್ರಿ ಮೋದಿ ಸಾಧನೆ, ರಾಜ್ಯದ ಸಮ್ಮೀಶ್ರ ಸರ್ಕಾರದ ವೈಫಲ್ಯ, ಹಿಂದಿನ ಬಿಜೆಪಿ ಸಕರ್ಾರದ ಸಾಧನೆ ನಮಗೆ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದ ಯಡಿಯೂರಪ್ಪ ಅವರು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಗೃಹ ಸಚಿವ ಎಂ.ಬಿ. ಪಾಟೀಲ್ರ ಲಿಂಗಾಯತರ ಪ್ರತ್ಯೇಕ ಧರ್ಮದ ಪರ-ವಿರೋಧ ಮಾತುಗಳು ಅವರಿಗೆ ಬಿಟ್ಟಿದ್ದು, ತಂತ್ರ ಕುತಂತ್ರದಿಂದ ಅವರು ಮಾತಾಡತೀದಾರೋ ಗೊತ್ತಿಲ್ಲ, ಕಾಂಗ್ರೆಸ್ನಲ್ಲಿ ಎಲ್ಲವೂ ಸರಿ ಇಲ್ಲ ಎಂದು ಇದೇ ವೇಳೆ ಯಡಿಯೂರಪ್ಪ ಮಾತನಾಡಿದರು.
ಸುಮಲತಾ ಅವರನ್ನು 'ಮಾಯಾಂಗನೆ' ಎಂಬ ಮಂಡ್ಯದ ಸಂಸದ ಶಿವರಾಮೇಗೌಡ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಸೋಲುವ ಭೀತಿಯಿಂದ ಹೀಗೆಲ್ಲ ಮಾತಾಡ್ತಿದ್ದಾರೆ. ಸಂಸದ ಶಿವರಾಮೇಗೌಡ ಹಗುರವಾಗಿ ಮಾತಾಡೊಕ್ಕೆ ಹೆಸರಾಗಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಗೆಲುವು ಖಚಿತವಾಗಿದೆ ಎಂದು ಯಡಿಯೂರಪ್ಪ ಹೇಳಿದರು.
ಈ ಸಂದರ್ಭದಲ್ಲಿ ಕೊಪ್ಪಳ ಲೋಕಸಭೆ ಬಿಜೆಪಿ ಅಭ್ಯಥರ್ಿ ಸಂಗಣ್ಣ ಕರಡಿ, ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ್ ದಡೇಸೂಗೂರು, ಬಿಜೆಪಿ ಮುಖಂಡರಾದ ಅಂದಾನಪ್ಪ ಅಗಡಿ,ಅಮರೇಶ ಕರಡಿ, ಚಂದ್ರಶೇಖರಗೌಡ ಹಲಿಗೇರಿ, ಗವಿಸಿದ್ದಪ್ಪ ಕರಡಿ ಸೇರಿದಂತೆ ಮತ್ತೀತರರು ಉಪಸ್ಥಿತರಿದ್ದರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 