ಕೊಪ್ಪಳ: ಕೊನೆಯ ದಿನದ ಜಾತ್ರೋತ್ಸವ, ಹರಿದು ಬಂದ ಭಕ್ತಸಾಗರ
ಕೊಪ್ಪಳ 24: ದಕ್ಷಿಣ ಭಾರತದ ಕುಂಭಮೇಳ ಎಂದೇ ಪ್ರಸಿದ್ಧವಾದ ಕೊಪ್ಪಳದ ಸುಪ್ರಸಿದ್ಧ ಗವಿಸಿದ್ದೇಶ್ವರ ಜಾತ್ರೆಯ ಕೊನೆಯ ದಿನವಾದ ಇಂದು ಹಾಗೂ ಅಮವಾಸ್ಯೆ ಹಿನ್ನೆಲೆಯಲ್ಲಿ ಶ್ರೀಮಠಕ್ಕೆ ಭಕ್ತ ಸಾಗರ ಹರಿದು ಬಂತು.
ಶುಕ್ರವಾರದಂದು ಬೆಳಗ್ಗೆಯಿಂದಲೇ ರಾಜ್ಯದ ನಾನಾ ಮೂಲೆಗಳಿಂದ ಭಕ್ತರು ಆಗಮಿಸಿ ಶ್ರೀಗವಿಸಿದ್ದೇಶ್ವರ ದೇವರ ದರ್ಶನ ಪಡೆದರು.
ಜನವರಿ 12ರಂದು ಶ್ರೀ ಗವಿಮಠದ ಮಹಾರಥೋತ್ಸವಕ್ಕೆ ಚಾಲನೆ ನೀಡಲಾಗಿತ್ತು. ಅಂದಿನಿಂದ ಪ್ರಾರಂಭವಾದ ಜಾತ್ರೆ ಇಂದು ಅಮವಾಸ್ಯೆಗೆ ಮುಕ್ತಾಯವಾಗಲಿದೆ. ಮಹಾದಾಸೋಹದಲ್ಲಿ ಭಕ್ತರಿಗೆ ಊಟಕ್ಕೆ ಗೋದಿ ಪಾಯಸ,ವಿವಿಧ ತರಕಾರಿ ಪಲ್ಯೆ, ಅನ್ನ ಸಾಂಬಾರ್, ಉಪ್ಪಿನಕಾಯಿ, ಕಡಲೆ ಚಟ್ನಿ ನೀಡಲಾಯಿತು.
ದಾಸೋಹದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಗವಿಸಿದ್ದಪ್ಪ ಕರಡಿ, ಶರಣಪ್ಪ ಗಿಣಿಗೇರಾ, ಶ್ರೀನಿವಾಸ ಪೂಜಾರ್, ವಿರೇಶ ಇಂದರಗಿ ಸೇರಿದಂತೆ ಇತರರು ಸೇವೆ ಸಲ್ಲಿಸಿದರು.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 