ಕೊಪ್ಪಳ: ಕೊನೆಯ ದಿನದ ಜಾತ್ರೋತ್ಸವ, ಹರಿದು ಬಂದ ಭಕ್ತಸಾಗರ
ಕೊಪ್ಪಳ 24: ದಕ್ಷಿಣ ಭಾರತದ ಕುಂಭಮೇಳ ಎಂದೇ ಪ್ರಸಿದ್ಧವಾದ ಕೊಪ್ಪಳದ ಸುಪ್ರಸಿದ್ಧ ಗವಿಸಿದ್ದೇಶ್ವರ ಜಾತ್ರೆಯ ಕೊನೆಯ ದಿನವಾದ ಇಂದು ಹಾಗೂ ಅಮವಾಸ್ಯೆ ಹಿನ್ನೆಲೆಯಲ್ಲಿ ಶ್ರೀಮಠಕ್ಕೆ ಭಕ್ತ ಸಾಗರ ಹರಿದು ಬಂತು.
ಶುಕ್ರವಾರದಂದು ಬೆಳಗ್ಗೆಯಿಂದಲೇ ರಾಜ್ಯದ ನಾನಾ ಮೂಲೆಗಳಿಂದ ಭಕ್ತರು ಆಗಮಿಸಿ ಶ್ರೀಗವಿಸಿದ್ದೇಶ್ವರ ದೇವರ ದರ್ಶನ ಪಡೆದರು.
ಜನವರಿ 12ರಂದು ಶ್ರೀ ಗವಿಮಠದ ಮಹಾರಥೋತ್ಸವಕ್ಕೆ ಚಾಲನೆ ನೀಡಲಾಗಿತ್ತು. ಅಂದಿನಿಂದ ಪ್ರಾರಂಭವಾದ ಜಾತ್ರೆ ಇಂದು ಅಮವಾಸ್ಯೆಗೆ ಮುಕ್ತಾಯವಾಗಲಿದೆ. ಮಹಾದಾಸೋಹದಲ್ಲಿ ಭಕ್ತರಿಗೆ ಊಟಕ್ಕೆ ಗೋದಿ ಪಾಯಸ,ವಿವಿಧ ತರಕಾರಿ ಪಲ್ಯೆ, ಅನ್ನ ಸಾಂಬಾರ್, ಉಪ್ಪಿನಕಾಯಿ, ಕಡಲೆ ಚಟ್ನಿ ನೀಡಲಾಯಿತು.
ದಾಸೋಹದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಗವಿಸಿದ್ದಪ್ಪ ಕರಡಿ, ಶರಣಪ್ಪ ಗಿಣಿಗೇರಾ, ಶ್ರೀನಿವಾಸ ಪೂಜಾರ್, ವಿರೇಶ ಇಂದರಗಿ ಸೇರಿದಂತೆ ಇತರರು ಸೇವೆ ಸಲ್ಲಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 