ಕೊಪ್ಪಳ ನೂತನ ಡಿಸಿ ಸುನಿಲ್ಕುಮಾರ್ ಅಧಿಕಾರ ಸ್ವೀಕಾರ
ಕೊಪ್ಪಳ 07: ಕೊಪ್ಪಳ ನೂತನ ಜಿಲ್ಲಾಧಿಕಾರಿಯಾಗಿ 2011ರ ಬ್ಯಾಚ್ನ ಐಎಎಸ್ ಅಧಿಕಾರಿ ಪೊಮ್ಮಲ ಸುನೀಲ್ಕುಮಾರ ಅವರು ಮಂಗಳವಾರದಂದು ಅಧಿಕಾರ ವಹಿಸಿಕೊಂಡರು.
ಜಿಲ್ಲಾಧಿಕಾರಿಯಾಗಿದ್ದ ಎಂ. ಕನಗವಲ್ಲಿ ಅವರನ್ನು ಪದವಿಪೂರ್ವ ಶಿಕ್ಷಣ ಇಲಾಖೆಗೆ ವಗರ್ಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಪೊಮ್ಮಲ ಸುನಿಲ್ ಕುಮಾರ್ ಅವರನ್ನು ಸಕರ್ಾರ ನೇಮಿಸಿ ಸೋಮವಾರವಷ್ಟೆ ಆದೇಶ ಹೊರಡಿಸಿತ್ತು. ಎಂ. ಕನಗವಲ್ಲಿ ಅವರು ನೂತನ ಜಿಲ್ಲಾಧಿಕಾರಿಗೆ ಹೂಗುಚ್ಛ ನೀಡುವ ಮೂಲಕ ಕೊಪ್ಪಳಕ್ಕೆ ಸ್ವಾಗತಿಸಿಕೊಂಡರು. ಎಂ. ಕನಗವಲ್ಲಿ ಅವರು, ಕಳೆದ 2015 ರ ನವೆಂಬರ್ ತಿಂಗಳಿನಲ್ಲಿ ಕೊಪ್ಪಳ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಸುಮಾರು 02 ವರ್ಷ 09 ತಿಂಗಳುಗಳ ಸುದೀರ್ಘ ಅವಧಿಗೆ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದು, ಉತ್ತಮ ಜನಾನುರಾಗಿ ಕಾರ್ಯಗಳ ಮೂಲಕ ಜನಮನ್ನಣೆಗೆ ಪಾತ್ರರಾಗಿದ್ದರು.
ಮೂಲತಃ ಆಂಧ್ರಪ್ರದೇಶದ ಕಡಪ ಜಿಲ್ಲೆಯವರಾದ ಪೊಮ್ಮಲ ಸುನೀಲ್ಕುಮಾರ್ ಅವರು, ಎಲೆಕ್ಟ್ರಿಕಲ್ ಇಂಜಿನಿಯರ್ ಪದವಿ ಪಡೆದಿದ್ದು, ತಮಿಳುನಾಡಿನ ಚೆನ್ನೈನಲ್ಲಿ ಹಾಗೂ ಅಮೆರಿಕಾದ ನ್ಯೂಜೆಸರ್ಿಯಲ್ಲಿ ಸಾಫ್ಟ್ವೇರ್ ಕಂಪನಿಗಳಲ್ಲಿ ಸುಮಾರು 07 ವರ್ಷಗಳ ಕಾರ್ಯ ನಿರ್ವಹಿಸಿದ್ದಾರೆ. ಬಳಿಕ ಈ ನೌಕರಿಗೆ ರಾಜೀನಾಮೆ ನೀಡಿ, ಶ್ರಮಪಟ್ಟು ವ್ಯಾಸಂಗ ಮಾಡಿ, ಯುಪಿಎಸ್ಸಿ ಪರೀಕ್ಷೆ ಬರೆದು, 2011 ರಲ್ಲಿ ಐಎಎಸ್ ಅಧಿಕಾರಿಯಾಗಿ ಆಯ್ಕೆಯಾದರು. ಹಾಸನ ಜಿಲ್ಲೆಯಲ್ಲಿ ಐಎಎಸ್ ಟ್ರೈನಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಬಳಿಕ, ಹೊಸಪೇಟೆ ಉಪವಿಭಾಗಾಧಿಕಾರಿಯಾಗಿ ಒಂದು ವರ್ಷ 04 ತಿಂಗಳು ಸೇವೆ ಸಲ್ಲಿಸಿದರು. ನಂತರ ಯಾದಗಿರಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿಯಾಗಿ 07 ತಿಂಗಳ ಸೇವೆ. ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಆಯುಕ್ತರಾಗಿ 02 ವರ್ಷ ಮೂರು ತಿಂಗಳ ಸೇವೆ. ಬೆಂಗಳೂರಿನಲ್ಲಿ ವಸತಿ ಇಲಾಖೆಯಲ್ಲಿ ರಿಯಲ್ ಎಸ್ಟೇಟ್ ರೆಗ್ಯುಲಾರಿಟಿ ಅಥಾರಿಟಿಯಲ್ಲಿ ಕಾರ್ಯದಶರ್ಿಗಳ ಹುದ್ದೆ, ಕಾಮರ್ಿಕ ಇಲಾಖೆಯ ಕಟ್ಟಡ ಕಾಮರ್ಿಕರ ಕಲ್ಯಾಣ ಮಂಡಳಿಯಲ್ಲಿ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಕೊಪ್ಪಳ ಜಿಲ್ಲಾಧಿಕಾರಿಯಾಗಿ ವಗರ್ಾವಣೆಯಾಗುವುದಕ್ಕೂ ಮುನ್ನ ನಗರಾಭಿವೃದ್ಧಿ ಇಲಾಖೆಯ ಕನರ್ಾಟಕ ಮುನಿಸಿಪಲ್ ಡಾಟಾ ಸೊಸೈಟಿಯಲ್ಲಿ ಜಂಟಿನಿದರ್ೇಶಕರ (ಸುಧಾರಣೆ) ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 