ಬೇಸಿಗೆಯಲ್ಲಿ ಕುಡಿಯುವ ನೀರು ಮತ್ತು ಮೇವಿನ ಲಭ್ಯತೆತಹಶೀಲ್ದಾರ ಅಧ್ಯಕ್ಷತೆಯಲ್ಲಿ ಜರುಗಿದ ಕೊಪ್ಪಳ ತಾಲೂಕ ಮಟ್ಟದ ಸಭೆ

Koppal Taluk level meeting held under the chairmanship of the Tahsildar regarding availability of dr

ಬೇಸಿಗೆಯಲ್ಲಿ ಕುಡಿಯುವ ನೀರು ಮತ್ತು ಮೇವಿನ ಲಭ್ಯತೆತಹಶೀಲ್ದಾರ ಅಧ್ಯಕ್ಷತೆಯಲ್ಲಿ ಜರುಗಿದ ಕೊಪ್ಪಳ ತಾಲೂಕ ಮಟ್ಟದ ಸಭೆ

ಕೊಪ್ಪಳ 05: ಬೇಸಿಗೆ ಪ್ರಾರಂಭವಾಗಿರುವದರಿಂದ ಗ್ರಾಮೀಣ ಭಾಗ ಮತ್ತು ನಗರ ಪ್ರದೇಶಗಳಲ್ಲಿ ಕುಡಿಯುವ ನೀರು ಮತ್ತು ಮೇವಿನ ಲಭ್ಯತೆ ಕುರಿತು ಮಂಗಳವಾರ ಕೊಪ್ಪಳ ತಾಲೂಕ ಪಂಚಾಯತಿ ಕೊಪ್ಪಳದಲ್ಲಿ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಹಾಗೂ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆ ಜರುಗಿತು.  

ತಹಶೀಲ್ದಾರ ವಿಠ್ಠಲ್ ಚೌಗಲಾ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿ, ಬೇಸಿಗೆ ಪ್ರಾರಂಭವಾಗಿರುವುದರಿಂದ ಕುಡಿಯುವ ನೀರಿನ ಕೊರತೆ ಉಂಟಾಗುವ ಸಂಭವವಿದ್ದು, ಗ್ರಾಮೀಣ ಮತ್ತು ನಗರಕ್ಕೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುನ್ನಚ್ಛೇರಿಕೆ ಕ್ರಮ ಕೈಗೊಳ್ಳಲು ಸೂಚಿಸಿದರು.  

ನಾನ್ ಪೋರ್ಟೆಬಲ್ ಬಂದ ನೀರಿನ ಮೂಲಗಳಿಂದ ಕುಡಿಯುವ ನೀರು ಸರಬರಾಜು ಮಾಡಬಾರದು ಮತ್ತು ಜನರಿಗೆ ಕುಡಿಯಲು ಬಳಸಬಾರದೆಂದು ಜಾಗೃತಿ ಮೂಡಿಸಬೇಕು. ಪ್ರತಿ ವಾರ ಕಡ್ಡಾಯವಾಗಿ ಗ್ರಾಮ ಪಂಚಾಯತಿ ಮಟ್ಟದ ಕುಡಿಯುವ ನೀರಿನ ಮತ್ತು ಮೇವಿನ ಟಾಸ್ಕ್‌ ಫೋರ್ಸ್‌ ಸಭೆ ಜರುಗಿಸಿ ಅದರ ಪ್ರತಿಯನ್ನು ತಾಲೂಕ ಪಂಚಾಯತಿಗೆ ಸಲ್ಲಿಸಬೇಕು. ಎಲ್ಲಾ ಅಧಿಕಾರಿಗಳು ಸಮನ್ವಯ ಸಾಧಿಸಿ ಕುಡಿಯುವ ನೀರಿನ ಅಭಾವ ಬರದಂತೆ ಕ್ರಮವಹಿಸಿ. ಇಂದ್ರನಗರದಲ್ಲಿ ಹೊಸದಾಗಿ ಕಟ್ಟಿರುವ ಓ.ಹೆಚ್‌.ಟಿ ಗೆ ತ್ವರಿತವಾಗಿ ಪೈಪಲೈನ್ ಸಂಪರ್ಕ ಕೈಗೊಳಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ಸೂಚಿಸಿದರು. 

ಕೊಪ್ಪಳ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ ಅವರು ಮಾತನಾಡಿ, ನೆಲೋಗಿಪುರ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮೂಲಕ ತಾಲೂಕಿನ ಅಳವಂಡಿ, ಬೋಚನಹಳ್ಳಿ, ಕವಲೂರು, ಹಟ್ಟಿ 4 ಗ್ರಾಮ ಪಂಚಾಯತಿಗಳ 14 ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದ್ದು, ಮುಂದಿನ ಒಂದು ವಾರದ ವರೆಗೆ ನದಿಯಲ್ಲಿರುವ ನೀರಿನ ಮೂಲಕ ಸರಬರಾಜು ಮಾಡಬಹುದಾಗಿದೆ ಮತ್ತು ಮುಂದಿನ ವಾರದಿಂದ ಗ್ರಾಮ ಪಂಚಾಯತಿಗಳಿಗೆ ನೀರಿನ ಅಭಾವವಾಗಬಹುದು. ಈ 4 ಗ್ರಾಮ ಪಂಚಾಯತಿಯವರು ಸರಕಾರಿ ಬೋರೆವೆಲ್‌ಗಳನ್ನು ಪರೀಶೀಲಿಸಿ ಸನ್ನದ್ದು ಮಾಡಿಕೊಳ್ಳಲು ಮತ್ತು ಮುನ್ನೆಚ್ಚರಿಕೆಯಾಗಿ ಖಾಸಗಿ ಬೋರೆವೆಲ್ ಗುರುತಿಸಿ ಮಾಲೀಕರಿಂದ ಒಪ್ಪಂದ ಮಾಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಸಭೆಯಲ್ಲಿ ನಗರಸಭೆಯ ಅಧಿಕಾರಿಗಳು, ಭಾಗ್ಯನಗರ ಪಟ್ಟಣ ಪಂಚಾಯತಿಯ ಅಧಿಕಾರಿಗಳು, ತಾಲೂಕ ಮಟ್ಟದ ಅಧಿಕಾರಿಗಳು, ಉಪತಹಶೀಲ್ದಾರರು, ಕಂದಾಯ ನಿರಿಕ್ಷಕರು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳು, ತಾಲೂಕ ಪಂಚಾಯತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.